<p><strong>ಬರೇಲಿ:</strong> ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಕುಮಾರ್ ಭಾರತವನ್ನು ಒಗ್ಗೂಡಿಸಿದ ವ್ಯಕ್ತಿಯ ಬದಲು ದೇಶದ ವಿಭಜನೆಗೆ ಕಾರಣವಾದ ವ್ಯಕ್ತಿಯನ್ನು ಏಕೆ ನೆನಪಿಸಿಕೊಳ್ಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರಶ್ನಿಸಿದ್ದಾರೆ.</p>.<p>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಉದ್ದೇಶಿಸಿ ಭಾಷಣ ಮಾಡಿದ ನಡ್ಡಾ, 'ಭಾರತ ವಿಭಜನೆಗೆ ಕಾರಣವಾದ ವ್ಯಕ್ತಿಯನ್ನು ಅಖಿಲೇಶ್ ಏಕೆ ನೆನಪಿಸಿಕೊಳ್ಳುತ್ತಾರೆ? ದೇಶವನ್ನು ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಏಕೆ ಸ್ಮರಿಸುತ್ತಿಲ್ಲ' ಎಂದು ಪ್ರಶ್ನಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/up-polls-sp-workers-resolve-to-don-red-caps-godsend-for-poll-merch-sellers-906116.html" itemprop="url">ಉತ್ತರ ಪ್ರದೇಶ: ಎಸ್ಪಿ ಕಾರ್ಯಕರ್ತರಿಂದ ರಾಶಿ ರಾಶಿ ಕೆಂಪು ಟೋಪಿ ಖರೀದಿ </a></p>.<p>ಕಳೆದ ವರ್ಷ ಅಕ್ಟೋಬರ್ನಲ್ಲಿ ಮಹಾತ್ಮ ಗಾಂಧಿ, ಜವಾಹರ್ಲಾಲ್ ನೆಹರೂ, ಸರ್ದಾರ್ ಪಟೇಲ್ ಅವರೊಂದಿಗೆ ಪಾಕಿಸ್ತಾನದ ಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾರನ್ನು ಅಖಿಲೇಶ್ ಹೋಲಿಕೆ ಮಾಡಿದ್ದರು ಎಂದು ಆರೋಪಿಸಲಾಗಿದೆ.</p>.<p>ಈ ಮೊದಲು ಅಖಿಲೇಶ್ ಯಾದವ್ ಅವರು ಪಾಕಿಸ್ತಾನದ ಬೆಂಬಲಿಗ ಮತ್ತು ಜಿನ್ನಾರ ಆರಾಧಕ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದರು.</p>.<p>ಚುನಾವಣೆಯಲ್ಲಿ ಕಬ್ಬಿನ ವಿಷಯವನ್ನು ಪ್ರಸಾಪಿಸಬೇಕೇ ಹೊರತು ಪಾಕಿಸ್ತಾನಿ ನಾಯಕನ ಹೆಸರಲ್ಲ ಎಂದು ಬಿಜೆಪಿ ನಾಯಕ ರಾಜನಾಥ್ ಸಿಂಗ್ ಕೂಡ ಟೀಕೆ ಮಾಡಿದ್ದರು.</p>.<p>ಅಖಿಲೇಶ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ನಡ್ಡಾ, 'ಹಿಂದಿನ ಸರ್ಕಾರ ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ಅಭದ್ರತೆ ಕಾಡುತ್ತಿತ್ತು. ಕಾನೂನು, ಸುವ್ಯವಸ್ಥೆ ಇರಲಿಲ್ಲ. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ಮಾಫಿಯಾ ಶರಣಾಗತಿ ಆಗುತ್ತಿದ್ದು, ಜೈಲಿಗೆ ಕಳಹಿಸಲಾಗುತ್ತಿದೆ ಅಥವಾ ರಾಜ್ಯವನ್ನು ತೊರೆಯುತ್ತಿದ್ದಾರೆ' ಎಂದು ಹೇಳಿದರು.</p>.<p>ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ಗಳಿಗೆ ಅಖಿಲೇಶ್ ಟಿಕೆಟ್ ನೀಡುತ್ತಿದ್ದಾರೆ ಎಂದು ಸಹ ನಡ್ಡಾ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರೇಲಿ:</strong> ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಕುಮಾರ್ ಭಾರತವನ್ನು ಒಗ್ಗೂಡಿಸಿದ ವ್ಯಕ್ತಿಯ ಬದಲು ದೇಶದ ವಿಭಜನೆಗೆ ಕಾರಣವಾದ ವ್ಯಕ್ತಿಯನ್ನು ಏಕೆ ನೆನಪಿಸಿಕೊಳ್ಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರಶ್ನಿಸಿದ್ದಾರೆ.</p>.<p>ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಉದ್ದೇಶಿಸಿ ಭಾಷಣ ಮಾಡಿದ ನಡ್ಡಾ, 'ಭಾರತ ವಿಭಜನೆಗೆ ಕಾರಣವಾದ ವ್ಯಕ್ತಿಯನ್ನು ಅಖಿಲೇಶ್ ಏಕೆ ನೆನಪಿಸಿಕೊಳ್ಳುತ್ತಾರೆ? ದೇಶವನ್ನು ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಏಕೆ ಸ್ಮರಿಸುತ್ತಿಲ್ಲ' ಎಂದು ಪ್ರಶ್ನಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/up-polls-sp-workers-resolve-to-don-red-caps-godsend-for-poll-merch-sellers-906116.html" itemprop="url">ಉತ್ತರ ಪ್ರದೇಶ: ಎಸ್ಪಿ ಕಾರ್ಯಕರ್ತರಿಂದ ರಾಶಿ ರಾಶಿ ಕೆಂಪು ಟೋಪಿ ಖರೀದಿ </a></p>.<p>ಕಳೆದ ವರ್ಷ ಅಕ್ಟೋಬರ್ನಲ್ಲಿ ಮಹಾತ್ಮ ಗಾಂಧಿ, ಜವಾಹರ್ಲಾಲ್ ನೆಹರೂ, ಸರ್ದಾರ್ ಪಟೇಲ್ ಅವರೊಂದಿಗೆ ಪಾಕಿಸ್ತಾನದ ಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾರನ್ನು ಅಖಿಲೇಶ್ ಹೋಲಿಕೆ ಮಾಡಿದ್ದರು ಎಂದು ಆರೋಪಿಸಲಾಗಿದೆ.</p>.<p>ಈ ಮೊದಲು ಅಖಿಲೇಶ್ ಯಾದವ್ ಅವರು ಪಾಕಿಸ್ತಾನದ ಬೆಂಬಲಿಗ ಮತ್ತು ಜಿನ್ನಾರ ಆರಾಧಕ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದರು.</p>.<p>ಚುನಾವಣೆಯಲ್ಲಿ ಕಬ್ಬಿನ ವಿಷಯವನ್ನು ಪ್ರಸಾಪಿಸಬೇಕೇ ಹೊರತು ಪಾಕಿಸ್ತಾನಿ ನಾಯಕನ ಹೆಸರಲ್ಲ ಎಂದು ಬಿಜೆಪಿ ನಾಯಕ ರಾಜನಾಥ್ ಸಿಂಗ್ ಕೂಡ ಟೀಕೆ ಮಾಡಿದ್ದರು.</p>.<p>ಅಖಿಲೇಶ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ನಡ್ಡಾ, 'ಹಿಂದಿನ ಸರ್ಕಾರ ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ಅಭದ್ರತೆ ಕಾಡುತ್ತಿತ್ತು. ಕಾನೂನು, ಸುವ್ಯವಸ್ಥೆ ಇರಲಿಲ್ಲ. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು, ಮಾಫಿಯಾ ಶರಣಾಗತಿ ಆಗುತ್ತಿದ್ದು, ಜೈಲಿಗೆ ಕಳಹಿಸಲಾಗುತ್ತಿದೆ ಅಥವಾ ರಾಜ್ಯವನ್ನು ತೊರೆಯುತ್ತಿದ್ದಾರೆ' ಎಂದು ಹೇಳಿದರು.</p>.<p>ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ಗಳಿಗೆ ಅಖಿಲೇಶ್ ಟಿಕೆಟ್ ನೀಡುತ್ತಿದ್ದಾರೆ ಎಂದು ಸಹ ನಡ್ಡಾ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>