<p><strong>ಅಯೋಧ್ಯೆ:</strong> ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಲ್ಲ ಹೆಸರುಗಳನ್ನು ಬದಲಾಯಿಸಿದರು. ಈಗ ಅವರ ಹೆಸರೇ ಬದಲಾಗಿದ್ದು, ‘ಬಾಬಾ ಬುಲ್ಡೋಜರ್’ ಎಂದಾಗಿದೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಅಖಿಲೇಶ್ ಯಾದವ್ ಟೀಕಿಸಿದರು.</p>.<p>ಅಯೋಧ್ಯೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಬಿಜೆಪಿ ನಾಯಕರು ಈಗ ಎ, ಬಿ, ಸಿ, ಡಿ ಕಲಿಯುತ್ತಿದ್ದಾರೆ. ಕರಾಳ ಕೃಷಿ ಕಾಯ್ದೆಗಳು ಮೊದಲು ರದ್ದಾದವು. ಯೋಗಿ ಜೀ ಕೂಡ ಇನ್ನು ವಾಪಸಾಗಲಿದ್ದಾರೆ ಎಂಬುದನ್ನು ಬಿಜೆಪಿ ನಾಯಕರಿಗೆ ಹೇಳಲು ಬಯಸುತ್ತೇನೆ’ ಎಂದು ಅಖಿಲೇಶ್ ಹೇಳಿದರು.</p>.<p><a href="https://www.prajavani.net/india-news/pm-narendra-modi-says-bjp-has-brought-up-out-of-the-darkness-of-riot-curfew-ransom-912673.html" itemprop="url">ದಂಗೆ, ಸುಲಿಗೆಗಳಿಂದ ಉತ್ತರ ಪ್ರದೇಶಕ್ಕೆ ಮುಕ್ತಿ ಕೊಡಿಸಿದ ಬಿಜೆಪಿ: ಪ್ರಧಾನಿ ಮೋದಿ </a></p>.<p>ಈ ಮಧ್ಯೆ, ಎರಡು ಬಾರಿ ಜನರು ಸೋಲಿಸಿದ ಬಳಿಕವೂ ಸಮಾಜವಾದಿ ಪಕ್ಷದ ನಾಯಕರು ಮತ್ತೆ ಅಧಿಕಾರಕ್ಕೇರುವ ಕನಸು ಕಾಣುತ್ತಿದ್ದಾರೆ. ಆದರೆ ಜನ ಅವರನ್ನು ಮತ್ತೆ ತಿರಸ್ಕರಿಸಲಿದ್ದು, ಯೋಗಿ ಜೀ ಅವರನ್ನು ಮರಳಿ ಗದ್ದುಗೆಗೆ ಏರಿಸಲಿದ್ದಾರೆ ಎಂದು ಉನ್ನಾವೊದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಚುನಾವಣೆ ಕಣ ರಂಗೇರಿದ್ದು ಬಿಜೆಪಿ, ಎಸ್ಪಿ ಹಾಗೂ ಇತರ ರಾಜಕೀಯ ಪಕ್ಷಗಳ ನಡುವಣ ವಾಕ್ಸಮರ ತಾರಕಕ್ಕೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ:</strong> ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಲ್ಲ ಹೆಸರುಗಳನ್ನು ಬದಲಾಯಿಸಿದರು. ಈಗ ಅವರ ಹೆಸರೇ ಬದಲಾಗಿದ್ದು, ‘ಬಾಬಾ ಬುಲ್ಡೋಜರ್’ ಎಂದಾಗಿದೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಅಖಿಲೇಶ್ ಯಾದವ್ ಟೀಕಿಸಿದರು.</p>.<p>ಅಯೋಧ್ಯೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಬಿಜೆಪಿ ನಾಯಕರು ಈಗ ಎ, ಬಿ, ಸಿ, ಡಿ ಕಲಿಯುತ್ತಿದ್ದಾರೆ. ಕರಾಳ ಕೃಷಿ ಕಾಯ್ದೆಗಳು ಮೊದಲು ರದ್ದಾದವು. ಯೋಗಿ ಜೀ ಕೂಡ ಇನ್ನು ವಾಪಸಾಗಲಿದ್ದಾರೆ ಎಂಬುದನ್ನು ಬಿಜೆಪಿ ನಾಯಕರಿಗೆ ಹೇಳಲು ಬಯಸುತ್ತೇನೆ’ ಎಂದು ಅಖಿಲೇಶ್ ಹೇಳಿದರು.</p>.<p><a href="https://www.prajavani.net/india-news/pm-narendra-modi-says-bjp-has-brought-up-out-of-the-darkness-of-riot-curfew-ransom-912673.html" itemprop="url">ದಂಗೆ, ಸುಲಿಗೆಗಳಿಂದ ಉತ್ತರ ಪ್ರದೇಶಕ್ಕೆ ಮುಕ್ತಿ ಕೊಡಿಸಿದ ಬಿಜೆಪಿ: ಪ್ರಧಾನಿ ಮೋದಿ </a></p>.<p>ಈ ಮಧ್ಯೆ, ಎರಡು ಬಾರಿ ಜನರು ಸೋಲಿಸಿದ ಬಳಿಕವೂ ಸಮಾಜವಾದಿ ಪಕ್ಷದ ನಾಯಕರು ಮತ್ತೆ ಅಧಿಕಾರಕ್ಕೇರುವ ಕನಸು ಕಾಣುತ್ತಿದ್ದಾರೆ. ಆದರೆ ಜನ ಅವರನ್ನು ಮತ್ತೆ ತಿರಸ್ಕರಿಸಲಿದ್ದು, ಯೋಗಿ ಜೀ ಅವರನ್ನು ಮರಳಿ ಗದ್ದುಗೆಗೆ ಏರಿಸಲಿದ್ದಾರೆ ಎಂದು ಉನ್ನಾವೊದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಚುನಾವಣೆ ಕಣ ರಂಗೇರಿದ್ದು ಬಿಜೆಪಿ, ಎಸ್ಪಿ ಹಾಗೂ ಇತರ ರಾಜಕೀಯ ಪಕ್ಷಗಳ ನಡುವಣ ವಾಕ್ಸಮರ ತಾರಕಕ್ಕೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>