ಸಂಭಾಲ್ (ಉತ್ತರ ಪ್ರದೇಶ): ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ‘ಜನಸಂಖ್ಯಾ ನಿಯಂತ್ರಣ ಮಸೂದೆ‘, ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ಬಿಜೆಪಿಯ ಚುನಾವಣಾ ಪ್ರಚಾರದ ಭಾಗವಾಗಿದೆ‘ ಎಂದು ಆರೋಪಿಸಿರುವ ಸಮಾಜವಾದಿ ಪಕ್ಷದ ಸಂಸದ ಶಾಫೀಕ್ ಉರ್ ರೆಹಮಾನ್ ಬಾರಕ್, ‘ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಬೇಕೆಂದರೆ, ರಾಜ್ಯ ಸರ್ಕಾರ ವಿವಾಹಗಳನ್ನೇ ನಿಷೇಧಿಸಬೇಕು‘ ಎಂದು ವ್ಯಂಗ್ಯವಾಡಿದ್ದಾರೆ.