ಈ ವಿಷಯವು ಧಾರ್ಮಿಕ ಭಾವನೆಗಳೂ ಸೇರಿದಂತೆ ದೇಶದ ಪ್ರತಿಯೊಬ್ಬರ ಭಾವನೆಗಳಿಗೆ ಸಂಬಂಧಿಸಿರುವುದರ ಜೊತೆಗೆ ಅವರೆಲ್ಲರ ಕಾಳಜಿಯ ವಿಷಯವೂ ಆಗಿದೆ. ಹೀಗಾಗಿ, ಕೋವಿಡ್–19ರ ಸಂಭಾವ್ಯ ಮೂರನೇ ಅಲೆಯ ಆತಂಕದ ನಡುವೆಯೂ ಯಾತ್ರೆ ನಡೆಸಲು ಅನುಮತಿ ನೀಡಿರುವ ನಿರ್ಧಾರವನ್ನು ಪುನಃ ಪರಿಶೀಲಿಸಬೇಕು. ಇಲ್ಲದೇ ಹೋದಲ್ಲಿ, ನ್ಯಾಯಾಲಯವೇ ಈ ಬಗ್ಗೆ ಸೋಮವಾರ ಆದೇಶ ಹೊರಡಿಸಲಿದೆ ಎಂದು ನ್ಯಾಯಮೂರ್ತಿಗಳಾದ ಆರ್.ಎಫ್ ನರೀಮನ್ ಹಾಗೂ ಬಿ.ಆರ್. ಗವಾಯಿ ಅವರ ನ್ಯಾಯಪೀಠ ಸೂಚನೆ ನೀಡಿತು.