<p>ಲಖನೌ: ಕಳೆದ ವರ್ಷ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲವು ಕವಿಗಳಿಗೆ ಆಹ್ವಾನ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದರಿಂದ ಅಲಹಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯವು ಆಯೋಜಿಸಿದ್ದ ‘ಮುಶೈರಾ’ (ಕವಿಗೋಷ್ಠಿ) ರದ್ದುಗೊಳಿಸಲಾಗಿದೆ.</p>.<p>ಮೂಲಗಳ ಪ್ರಕಾರ, ಉತ್ತರ ಪ್ರದೇಶ ಉರ್ದು ಅಕಾಡೆಮಿ, ವಿಶ್ವವಿದ್ಯಾನಿಲಯದ ಉರ್ದು ವಿಭಾಗ ಮತ್ತು ಅದರ ಕೇಂದ್ರ ಸಾಂಸ್ಕೃತಿಕ ಸಮಿತಿಯು ಜಂಟಿಯಾಗಿ ವಿ.ವಿಯಲ್ಲಿ ‘ಮುಶೈರಾ’ವನ್ನು ಶುಕ್ರವಾರ ಸಂಜೆ ಆಯೋಜಿಸಿದ್ದವು.</p>.<p>ಈ ಗೋಷ್ಠಿಯ ಔಪಚಾರಿಕ ಉದ್ಘಾಟನೆಗೆ ಕೆಲವು ನಿಮಿಷಗಳ ಮೊದಲು, ವಿಶ್ವವಿದ್ಯಾಲಯದ ಅಧಿಕಾರಿಗಳು ಯಾವುದೇ ಕಾರಣ ನೀಡದೆ ಕಾರ್ಯಕ್ರಮ ರದ್ದುಗೊಳಿಸುವುದಾಗಿ ಘೋಷಿಸಿದರು. ಆಗ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಕವಿಗಳು ಕವಿಗೋಷ್ಠಿಯಲ್ಲಿ ಆಸೀನರಾಗಿದ್ದರು.</p>.<p>ಕವಿಗೋಷ್ಠಿ ರದ್ದತಿಯ ಹಿಂದಿರುವ ಕಾರಣಗಳನ್ನು ಬಹಿರಂಗಪಡಿಸಲು ವಿಶ್ವವಿದ್ಯಾಲಯದ ಆಡಳಿತವು ನಿರಾಕರಿಸಿದರೂ, ಕೇಸರಿ ಸಂಘಟನೆಗಳ ಮತ್ತು ಬಿಜೆಪಿಯಕೆಲವು ನಾಯಕರು ದೆಹಲಿಯ ಶಾಹೀನ್ ಬಾಗ್ನಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಕೆಲವು ಕವಿಗಳ ಉಪಸ್ಥಿತಿಯನ್ನು ವಿರೋಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ಕವಿಗೋಷ್ಠಿಗೆ ಆಹ್ವಾನಿಸಿದ್ದ ಕವಿಗಳಲ್ಲಿಕನಿಷ್ಠ ಇಬ್ಬರು ಸಿಎಎ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಲ್ಲದೇ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು’ ಎಂದು ಸ್ಥಳೀಯ ಬಿಜೆಪಿ ನಾಯಕರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆ ಇಬ್ಬರು ಕವಿಗಳ ಉಪಸ್ಥಿತಿ ವಿರೋಧಿಸಿ ಮತ್ತು ಕಾರ್ಯಕ್ರಮ ರದ್ದುಗೊಳಿಸುವಂತೆ ಒತ್ತಾಯಿಸಿ ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಹಂಚಿಕೊಂಡ ನಂತರ ಈ ವಿಷಯವು ಮುಖ್ಯಮಂತ್ರಿ ಕಚೇರಿಗೆ ತಲುಪಿದೆ’ ಎಂದು ಮೂಲಗಳು ತಿಳಿಸಿವೆ.</p>.<p>ಸಿಎಎ ವಿರುದ್ಧ ಮಹಿಳೆಯರು, ಅದರಲ್ಲೂ ಹೆಚ್ಚಾಗಿ ಮುಸ್ಲಿಮರು ಶಾಹೀನ್ ಬಾಗ್ನಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು. ಡಿಸೆಂಬರ್ 2019ರಲ್ಲಿ ಆರಂಭವಾದ ಪ್ರತಿಭಟನೆಗಳು ನಾಲ್ಕು ತಿಂಗಳುಗಳ ಕಾಲ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಖನೌ: ಕಳೆದ ವರ್ಷ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲವು ಕವಿಗಳಿಗೆ ಆಹ್ವಾನ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದರಿಂದ ಅಲಹಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯವು ಆಯೋಜಿಸಿದ್ದ ‘ಮುಶೈರಾ’ (ಕವಿಗೋಷ್ಠಿ) ರದ್ದುಗೊಳಿಸಲಾಗಿದೆ.</p>.<p>ಮೂಲಗಳ ಪ್ರಕಾರ, ಉತ್ತರ ಪ್ರದೇಶ ಉರ್ದು ಅಕಾಡೆಮಿ, ವಿಶ್ವವಿದ್ಯಾನಿಲಯದ ಉರ್ದು ವಿಭಾಗ ಮತ್ತು ಅದರ ಕೇಂದ್ರ ಸಾಂಸ್ಕೃತಿಕ ಸಮಿತಿಯು ಜಂಟಿಯಾಗಿ ವಿ.ವಿಯಲ್ಲಿ ‘ಮುಶೈರಾ’ವನ್ನು ಶುಕ್ರವಾರ ಸಂಜೆ ಆಯೋಜಿಸಿದ್ದವು.</p>.<p>ಈ ಗೋಷ್ಠಿಯ ಔಪಚಾರಿಕ ಉದ್ಘಾಟನೆಗೆ ಕೆಲವು ನಿಮಿಷಗಳ ಮೊದಲು, ವಿಶ್ವವಿದ್ಯಾಲಯದ ಅಧಿಕಾರಿಗಳು ಯಾವುದೇ ಕಾರಣ ನೀಡದೆ ಕಾರ್ಯಕ್ರಮ ರದ್ದುಗೊಳಿಸುವುದಾಗಿ ಘೋಷಿಸಿದರು. ಆಗ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಕವಿಗಳು ಕವಿಗೋಷ್ಠಿಯಲ್ಲಿ ಆಸೀನರಾಗಿದ್ದರು.</p>.<p>ಕವಿಗೋಷ್ಠಿ ರದ್ದತಿಯ ಹಿಂದಿರುವ ಕಾರಣಗಳನ್ನು ಬಹಿರಂಗಪಡಿಸಲು ವಿಶ್ವವಿದ್ಯಾಲಯದ ಆಡಳಿತವು ನಿರಾಕರಿಸಿದರೂ, ಕೇಸರಿ ಸಂಘಟನೆಗಳ ಮತ್ತು ಬಿಜೆಪಿಯಕೆಲವು ನಾಯಕರು ದೆಹಲಿಯ ಶಾಹೀನ್ ಬಾಗ್ನಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಕೆಲವು ಕವಿಗಳ ಉಪಸ್ಥಿತಿಯನ್ನು ವಿರೋಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ಕವಿಗೋಷ್ಠಿಗೆ ಆಹ್ವಾನಿಸಿದ್ದ ಕವಿಗಳಲ್ಲಿಕನಿಷ್ಠ ಇಬ್ಬರು ಸಿಎಎ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಲ್ಲದೇ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು’ ಎಂದು ಸ್ಥಳೀಯ ಬಿಜೆಪಿ ನಾಯಕರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆ ಇಬ್ಬರು ಕವಿಗಳ ಉಪಸ್ಥಿತಿ ವಿರೋಧಿಸಿ ಮತ್ತು ಕಾರ್ಯಕ್ರಮ ರದ್ದುಗೊಳಿಸುವಂತೆ ಒತ್ತಾಯಿಸಿ ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಹಂಚಿಕೊಂಡ ನಂತರ ಈ ವಿಷಯವು ಮುಖ್ಯಮಂತ್ರಿ ಕಚೇರಿಗೆ ತಲುಪಿದೆ’ ಎಂದು ಮೂಲಗಳು ತಿಳಿಸಿವೆ.</p>.<p>ಸಿಎಎ ವಿರುದ್ಧ ಮಹಿಳೆಯರು, ಅದರಲ್ಲೂ ಹೆಚ್ಚಾಗಿ ಮುಸ್ಲಿಮರು ಶಾಹೀನ್ ಬಾಗ್ನಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು. ಡಿಸೆಂಬರ್ 2019ರಲ್ಲಿ ಆರಂಭವಾದ ಪ್ರತಿಭಟನೆಗಳು ನಾಲ್ಕು ತಿಂಗಳುಗಳ ಕಾಲ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>