ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಜೀಪು ಹರಿಸಿ, ರೈತರ ಹತ್ಯೆ ಮಾಡಿದ್ದಾರೆ ಎಂದು ಮೃತ ರೈತರ ಮನೆಯವರು ಪ್ರಕರಣ ದಾಖಲಿಸಿದ್ದರು. ಆ ಎಫ್ಐಆರ್ ಅನ್ವಯ ಗುರುವಾರವೇ ಆಶಿಶ್ ಮಿಶ್ರಾ ಅವರಿಗೆ ನೋಟಿಸ್ ನೀಡಲಾಗಿತ್ತು. ಶುಕ್ರವಾರ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಬಳಿಕ ಮತ್ತೊಂದು ಸಮನ್ಸ್ ನೀಡಲಾಗಿತ್ತು.