ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿಗೆ ಬೈಪಾಸ್‌ ಸರ್ಜರಿ ಯಶಸ್ವಿ

Last Updated 30 ಮಾರ್ಚ್ 2021, 13:53 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಯಶಸ್ವಿಯಾಗಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ರಾಷ್ಟ್ರಪತಿ ಅವರ ಆರೋಗ್ಯ ಸ್ಥಿರವಾಗಿದ್ದು, ಏಮ್ಸ್‌ ವೈದ್ಯರ ವಿಶೇಷ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಹೇಳಿಕೆ ತಿಳಿಸಿದೆ.

‘ರಾಮನಾಥ್‌ ಕೋವಿಂದ್‌ ಅವರಿಗೆ ಯಶಸ್ವಿಯಾಗಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ವೈದ್ಯರ ತಂಡವನ್ನು ಅಭಿನಂದಿಸುತ್ತೇನೆ. ರಾಷ್ಟ್ರಪತಿ ಅವರ ಆರೋಗ್ಯದ ಕುರಿತು‌‌‌‌ ಏಮ್ಸ್ ವೈದ್ಯರ ಜೊತೆಗೆ ಮಾತನಾಡಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರಪತಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಕಳೆದ ಶುಕ್ರವಾರ ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT