<p><strong>ಪಟ್ನಾ</strong>: ರಾಷ್ಟ್ರೀಯ ಲೋಕಸಮತಾ ಪಾರ್ಟಿಯನ್ನು (ಆರ್ಎಲ್ಎಸ್ಪಿ) ಜೆಡಿಯುನಲ್ಲಿ ವಿಲೀನಗೊಳಿಸುವುದಾಗಿ ಆರ್ಎಲ್ಎಸ್ಪಿ ಮುಖ್ಯಸ್ಥರೂ ಆಗಿರುವ ಕೇಂದ್ರದ ಮಾಜಿ ಸಚಿವ ಉಪೇಂದ್ರ ಕುಶ್ವಾಹ ಭಾನುವಾರ ಹೇಳಿದರು.</p>.<p>ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯು ಪಕ್ಷದ ಮುಂದಿನ ನಡೆ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಕುಶ್ವಾಹ ಅವರಿಗೆ ನೀಡಿತು. ಸಮಿತಿ ಸಭೆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದರು.</p>.<p>‘ದೇಶದ ಪ್ರಸಕ್ತ ಸನ್ನಿವೇಶದಲ್ಲಿ ಸಮಾನ ಮನಸ್ಕ ಜನರು ಒಂದಾಗಬೇಕಿದೆ. ಹೀಗಾಗಿ ಹಿರಿಯ ಸಹೋದರರಂತಿರುವ ನಿತೀಶ್ಕುಮಾರ್ ಅವರ ನಾಯಕತ್ವದಲ್ಲಿ ನನ್ನ ರಾಜಕೀಯ ಪಯಣವನ್ನು ಮುಂದುವರಿಸಲು ನಿರ್ಧರಿಸಿದ್ದೇನೆ’ ಎಂದು ಹೇಳಿದರು.</p>.<p>‘ಜೆಡಿಯುನಲ್ಲಿ ಆರ್ಎಲ್ಎಸ್ಪಿ ವಿಲೀನಗೊಂಡ ಬಳಿಕ, ಪಕ್ಷದಲ್ಲಿ ನನ್ನ ಜವಾಬ್ದಾರಿ ಏನಿರಲಿದೆ ಎಂಬುದನ್ನು ನಿತೀಶ್ಕುಮಾರ್ ನಿರ್ಧರಿಸುವರು’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ರಾಷ್ಟ್ರೀಯ ಲೋಕಸಮತಾ ಪಾರ್ಟಿಯನ್ನು (ಆರ್ಎಲ್ಎಸ್ಪಿ) ಜೆಡಿಯುನಲ್ಲಿ ವಿಲೀನಗೊಳಿಸುವುದಾಗಿ ಆರ್ಎಲ್ಎಸ್ಪಿ ಮುಖ್ಯಸ್ಥರೂ ಆಗಿರುವ ಕೇಂದ್ರದ ಮಾಜಿ ಸಚಿವ ಉಪೇಂದ್ರ ಕುಶ್ವಾಹ ಭಾನುವಾರ ಹೇಳಿದರು.</p>.<p>ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯು ಪಕ್ಷದ ಮುಂದಿನ ನಡೆ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಕುಶ್ವಾಹ ಅವರಿಗೆ ನೀಡಿತು. ಸಮಿತಿ ಸಭೆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದರು.</p>.<p>‘ದೇಶದ ಪ್ರಸಕ್ತ ಸನ್ನಿವೇಶದಲ್ಲಿ ಸಮಾನ ಮನಸ್ಕ ಜನರು ಒಂದಾಗಬೇಕಿದೆ. ಹೀಗಾಗಿ ಹಿರಿಯ ಸಹೋದರರಂತಿರುವ ನಿತೀಶ್ಕುಮಾರ್ ಅವರ ನಾಯಕತ್ವದಲ್ಲಿ ನನ್ನ ರಾಜಕೀಯ ಪಯಣವನ್ನು ಮುಂದುವರಿಸಲು ನಿರ್ಧರಿಸಿದ್ದೇನೆ’ ಎಂದು ಹೇಳಿದರು.</p>.<p>‘ಜೆಡಿಯುನಲ್ಲಿ ಆರ್ಎಲ್ಎಸ್ಪಿ ವಿಲೀನಗೊಂಡ ಬಳಿಕ, ಪಕ್ಷದಲ್ಲಿ ನನ್ನ ಜವಾಬ್ದಾರಿ ಏನಿರಲಿದೆ ಎಂಬುದನ್ನು ನಿತೀಶ್ಕುಮಾರ್ ನಿರ್ಧರಿಸುವರು’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>