ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆ: ರಾಷ್ಟ್ರೀಯ ಯೋಜನೆ ಘೋಷಣೆಗೆ ಸಿ.ಎಂ ಮನವಿ

ನವದೆಹಲಿ: ಕೇಂದ್ರದ ಅಧಿಕ ಪ್ರಮಾಣದ ಅನುದಾನ ಒದಗಿಸುವ ನಿಟ್ಟಿನಲ್ಲಿ, ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಮುಖ್ಯಮಂತ್ರಿ ಕೋರಿದರು.
ಮೇಕೆದಾಟು ಸಮಾನಾಂತರ ಜಲಾಶಯ ನಿರ್ಮಾಣ ಕುರಿತ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಎದುರು ಇರುವ ಈ ವರದಿಯನ್ನು ಅನುಮೋದಿಸಿ ಯೋಜನೆಗೆ ಆರ್ಥಿಕ ನೆರವು ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಗೂ ಅಗತ್ಯ ಅನುದಾನ ನೀಡಬೇಕು ಎಂದು ಇದೇ ವೇಳೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಮಹದಾಯಿ ಯೋಜನೆ ಕೈಗೆತ್ತಿಕೊಳ್ಳಲು ಅಗತ್ಯವಿರುವ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿಯನ್ನು ಶೀಘ್ರವೇ ಒದಗಿಸಬೇಕು ಎಂದೂ ಆಗ್ರಹಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.