ಅಮರಾವತಿ: ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಗುರುವಾರ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ ಯೋಜನೆ ಕುರಿತ ಚರ್ಚೆಯ ಸಂದರ್ಭದಲ್ಲಿ ಆಡಳಿತದಲ್ಲಿರುವ ವೈಎಸ್ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಏಳು ಟಿಡಿಪಿ ಶಾಸಕರನ್ನು ಸಭಾಧ್ಯಕ್ಷರು ಒಂದು ದಿನಕ್ಕೆ ಅಮಾನತು ಮಾಡಿದರು.