<p><strong>ವಾರಾಣಸಿ</strong>: ’ಕೋವಿಡ್–19’ ಸಾಂಕ್ರಾಮಿಕದ ಬಿಕ್ಕಟ್ಟನ್ನು ಎದುರಿಸಲು ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಪ್ರಯತ್ನಗಳು ಶ್ಲಾಘನೀಯ’ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.</p>.<p>ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಗುರುವಾರ ₹ 1,500 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ’ಉತ್ತರ ಪ್ರದೇಶ ಸರ್ಕಾರ ಕೋವಿಡ್–19 ಎರಡನೇ ಅಲೆಯನ್ನು ನಿಯಂತ್ರಿಸಿ, ಸೋಂಕು ಹರಡದಂತೆ ಕೈಗೊಂಡ ಕ್ರಮಗಳು ಅಭೂತಪೂರ್ವವಾಗಿವೆ’ ಎಂದು ಬಣ್ಣಿಸಿದರು.</p>.<p>’ಈ ಹಿಂದೆ ಆರೋಗ್ಯ ಕ್ಷೇತ್ರದಲ್ಲಿ ಸೌಲಭ್ಯಗಳ ಲಭ್ಯತೆ ಕಡಿಮೆಯಾಗಿದ್ದು ಮತ್ತು ಇಚ್ಛಾಶಕ್ತಿಯ ಕೊರತೆಯ ಕಾರಣದಿಂದಾಗಿ ಸಣ್ಣ ಪುಟ್ಟ ಸಮಸ್ಯೆಗಳು ಬೃಹದಾಕಾರವಾಗಿ ಕಾಣುತ್ತಿದ್ದವು’ ಎಂದು ಅವರು ನೆನಪಿಸಿದರು.</p>.<p>ಇದಕ್ಕೂ ಮುನ್ನ ವಾರಾಣಸಿಯಲ್ಲಿ ಪ್ರಧಾನಿಯವರು ₹744 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ₹839 ಕೋಟಿ ಮೊತ್ತ ಯೋಜನೆಗಳಿಗೆ ಶಂಕುಸ್ಥಾನೆ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾರಾಣಸಿ</strong>: ’ಕೋವಿಡ್–19’ ಸಾಂಕ್ರಾಮಿಕದ ಬಿಕ್ಕಟ್ಟನ್ನು ಎದುರಿಸಲು ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಪ್ರಯತ್ನಗಳು ಶ್ಲಾಘನೀಯ’ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.</p>.<p>ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿ ಗುರುವಾರ ₹ 1,500 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ’ಉತ್ತರ ಪ್ರದೇಶ ಸರ್ಕಾರ ಕೋವಿಡ್–19 ಎರಡನೇ ಅಲೆಯನ್ನು ನಿಯಂತ್ರಿಸಿ, ಸೋಂಕು ಹರಡದಂತೆ ಕೈಗೊಂಡ ಕ್ರಮಗಳು ಅಭೂತಪೂರ್ವವಾಗಿವೆ’ ಎಂದು ಬಣ್ಣಿಸಿದರು.</p>.<p>’ಈ ಹಿಂದೆ ಆರೋಗ್ಯ ಕ್ಷೇತ್ರದಲ್ಲಿ ಸೌಲಭ್ಯಗಳ ಲಭ್ಯತೆ ಕಡಿಮೆಯಾಗಿದ್ದು ಮತ್ತು ಇಚ್ಛಾಶಕ್ತಿಯ ಕೊರತೆಯ ಕಾರಣದಿಂದಾಗಿ ಸಣ್ಣ ಪುಟ್ಟ ಸಮಸ್ಯೆಗಳು ಬೃಹದಾಕಾರವಾಗಿ ಕಾಣುತ್ತಿದ್ದವು’ ಎಂದು ಅವರು ನೆನಪಿಸಿದರು.</p>.<p>ಇದಕ್ಕೂ ಮುನ್ನ ವಾರಾಣಸಿಯಲ್ಲಿ ಪ್ರಧಾನಿಯವರು ₹744 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ₹839 ಕೋಟಿ ಮೊತ್ತ ಯೋಜನೆಗಳಿಗೆ ಶಂಕುಸ್ಥಾನೆ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>