ಮುಂಬೈ: ಧ್ವನಿವರ್ಧಕಗಳಲ್ಲಿ ‘ಹನುಮಾನ್ ಚಾಲೀಸಾ’ ಪಠಣದ ವಿವಾದವು ಮಹಾರಾಷ್ಟ್ರದ ರಾಜಕಾರಣದಲ್ಲಿ ಮತ್ತಷ್ಟು ಕಾವೇರಿಸಿದ್ದು, ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಆದಿತ್ಯ ಠಾಕ್ರೆ ಅವರು, ‘ಅಗತ್ಯ ವಸ್ತುಗಳ ಬೆಲೆ ಏರಿಕೆಯ ಹಿಂದಿನ ಕಾರಣಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಧ್ವನಿವರ್ಧಕಗಳನ್ನು ಬಳಸಬೇಕು’ ಎಂದು ಶುಕ್ರವಾರ ಸಲಹೆ ನೀಡಿದ್ದರೆ, ಶಾಸಕ ರವಿರಾಣಾ ಅವರು, ‘ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶನಿವಾರ ತಮ್ಮ ನಿವಾಸದಲ್ಲಿ ಹನುಮಾನ್ ಚಾಲೀಸಾ ಪಠಿಸಬೇಕು’ ಎಂದು ಹೇಳಿದ್ದಾರೆ.