<p class="title"><strong>ಮುಂಬೈ:</strong> ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ನಾಯಕರ ಕುಟುಂಬದ ಸದಸ್ಯರಿಗೆ ನೀಡಿರುವ ಕಿರುಕುಳ ಬಿಜೆಪಿಯ ಅಮಾನವೀಯ ಮುಖವನ್ನು ತೆರೆದಿಡುತ್ತದೆ ಎಂದು ಶಿವಸೇನೆ ಸೋಮವಾರ ವ್ಯಂಗ್ಯವಾಡಿದೆ.</p>.<p class="title">ಸಾಮಾನ್ಯವಾಗಿ ಜನರು ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿರುವುದಾಗಿ ಹೇಳುತ್ತಾರೆ. ಆದರೆ, ಮಹಾರಾಷ್ಟ್ರದಲ್ಲಿ ಇದು ತದ್ವಿರುದ್ಧವಾಗಿದ್ದು ಬಿಜೆಪಿ ಹಾಸ್ಯದ ಸರಕಾಗಿ ಮಾರ್ಪಟ್ಟಿದೆ ಎಂದು ಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p class="title">‘ಬಿಜೆಪಿಯು ತನ್ನ ಸ್ವಂತ ಕಾರ್ಯಸೂಚಿಗಾಗಿಯೇ ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ), ಐಟಿ (ಆದಾಯ ತೆರಿಗೆ ಇಲಾಖೆ) ಮತ್ತು ಎನ್ಸಿಬಿ (ಮಾದಕ ವಸ್ತುಗಳ ನಿಯಂತ್ರಣ ದಳ) ಬಳಸುತ್ತದೆ. ಇ.ಡಿ ಮತ್ತು ಸಿಬಿಐ ಬಳಸಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಠಾಕ್ರೆ ಬಹಿರಂಗಪಡಿಸಿದ್ದಾರೆ. ಇವು ಶಿಖಂಡಿಯನ್ನು ಗುರಾಣಿಯಾಗಿ ಬಳಸಿದಂತಿದೆ’ ಎಂದು ಶಿವಸೇನೆ ಅಣಕವಾಡಿದೆ.</p>.<p class="bodytext">ಪ್ರಶ್ನೆಗಳನ್ನು ಎದುರಿಸುವುದಿಲ್ಲ. ತಮ್ಮನ್ನು ಪಶ್ನಿಸುವವರನ್ನೂ ಮುಗಿಸುತ್ತಾರೆ ಎಂದು ಶಿವಸೇನೆಯು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮೇಲೆ ತೀಕ್ಷ್ಣವಾಗಿ ಕಿಡಿಕಾರಿದೆ.</p>.<p class="bodytext">‘ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ, ಸಂವಿಧಾನ, ಕಾನೂನು ಮತ್ತು ಸುವ್ಯವಸ್ಥೆ ಯಾವುದರಲ್ಲಿಯೂ ನಂಬಿಕೆ ಇಟ್ಟಿಲ್ಲ. ವಿರೋಧ ಪಕ್ಷಗಳ ಮುಖ್ಯಮಂತ್ರಿಗಳನ್ನೂ ಅವರು ಒಪ್ಪುವುದಿಲ್ಲ. ರಾಜಕೀಯದಲ್ಲಿನ ಈ ಹೊಸ ವಿದ್ಯಮಾನವು ಅವರ ಮನಸ್ಥಿತಿಯ ಬಗ್ಗೆ ಹೇಳುತ್ತದೆ’ ಎಂದು ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ:</strong> ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ನಾಯಕರ ಕುಟುಂಬದ ಸದಸ್ಯರಿಗೆ ನೀಡಿರುವ ಕಿರುಕುಳ ಬಿಜೆಪಿಯ ಅಮಾನವೀಯ ಮುಖವನ್ನು ತೆರೆದಿಡುತ್ತದೆ ಎಂದು ಶಿವಸೇನೆ ಸೋಮವಾರ ವ್ಯಂಗ್ಯವಾಡಿದೆ.</p>.<p class="title">ಸಾಮಾನ್ಯವಾಗಿ ಜನರು ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿರುವುದಾಗಿ ಹೇಳುತ್ತಾರೆ. ಆದರೆ, ಮಹಾರಾಷ್ಟ್ರದಲ್ಲಿ ಇದು ತದ್ವಿರುದ್ಧವಾಗಿದ್ದು ಬಿಜೆಪಿ ಹಾಸ್ಯದ ಸರಕಾಗಿ ಮಾರ್ಪಟ್ಟಿದೆ ಎಂದು ಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p class="title">‘ಬಿಜೆಪಿಯು ತನ್ನ ಸ್ವಂತ ಕಾರ್ಯಸೂಚಿಗಾಗಿಯೇ ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ), ಐಟಿ (ಆದಾಯ ತೆರಿಗೆ ಇಲಾಖೆ) ಮತ್ತು ಎನ್ಸಿಬಿ (ಮಾದಕ ವಸ್ತುಗಳ ನಿಯಂತ್ರಣ ದಳ) ಬಳಸುತ್ತದೆ. ಇ.ಡಿ ಮತ್ತು ಸಿಬಿಐ ಬಳಸಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಠಾಕ್ರೆ ಬಹಿರಂಗಪಡಿಸಿದ್ದಾರೆ. ಇವು ಶಿಖಂಡಿಯನ್ನು ಗುರಾಣಿಯಾಗಿ ಬಳಸಿದಂತಿದೆ’ ಎಂದು ಶಿವಸೇನೆ ಅಣಕವಾಡಿದೆ.</p>.<p class="bodytext">ಪ್ರಶ್ನೆಗಳನ್ನು ಎದುರಿಸುವುದಿಲ್ಲ. ತಮ್ಮನ್ನು ಪಶ್ನಿಸುವವರನ್ನೂ ಮುಗಿಸುತ್ತಾರೆ ಎಂದು ಶಿವಸೇನೆಯು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮೇಲೆ ತೀಕ್ಷ್ಣವಾಗಿ ಕಿಡಿಕಾರಿದೆ.</p>.<p class="bodytext">‘ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವ, ಸಂವಿಧಾನ, ಕಾನೂನು ಮತ್ತು ಸುವ್ಯವಸ್ಥೆ ಯಾವುದರಲ್ಲಿಯೂ ನಂಬಿಕೆ ಇಟ್ಟಿಲ್ಲ. ವಿರೋಧ ಪಕ್ಷಗಳ ಮುಖ್ಯಮಂತ್ರಿಗಳನ್ನೂ ಅವರು ಒಪ್ಪುವುದಿಲ್ಲ. ರಾಜಕೀಯದಲ್ಲಿನ ಈ ಹೊಸ ವಿದ್ಯಮಾನವು ಅವರ ಮನಸ್ಥಿತಿಯ ಬಗ್ಗೆ ಹೇಳುತ್ತದೆ’ ಎಂದು ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>