‘ದೇಶದಲ್ಲಿ ಸಾಂಸ್ಕೃತಿಕ ಮತ್ತು ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ತಮಿಳು ಜನರು ಯಾವಾಗಲೂ ಮುಂಚೂಣಿಯಲ್ಲಿದ್ದಾರೆ. ತಮಿಳಿಗರು ತಮ್ಮ ಭಾಷೆ, ಆಹಾರ ಮತ್ತು ಸಂಸ್ಕೃತಿ ಬಗ್ಗೆ ಅಪಾರ ಹೆಮ್ಮೆ ಹೊಂದಿದ್ದಾರೆ. ಇಂದಿಗೂ ಭಾರತದ ಭಾಷಾ ವೈವಿಧ್ಯತೆಯ ಬಗ್ಗೆ ಯೋಚಿಸಿದಾಗ, 60ರ ದಶಕದಲ್ಲಿ ತಮಿಳುನಾಡಿನಲ್ಲಿ ನಡೆದ ಹಿಂದಿ ವಿರೋಧಿ ಆಂದೋಲನದ ಹೋರಾಟವು ನೆನಪಿಗೆ ಬರುತ್ತದೆ’ ಎಂದೂ ಮುಖ್ಯ ನ್ಯಾಯಮೂರ್ತಿಗಳು ಶ್ಲಾಘಿಸಿದರು.