<p><strong>ಲಖನೌ</strong>:<strong> </strong>ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ಭಾರಿ ಯತ್ನ ನಡೆಸಿರುವ ಆಡಳಿತಾರೂಢ ಬಿಜೆಪಿಯು ಸರಣಿ ಆಘಾತಗಳನ್ನು ಎದುರಿಸುತ್ತಿದೆ.</p>.<p>ಯೋಗಿ ಆದಿತ್ಯನಾಥ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ, ಪ್ರಭಾವಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಂಗಳವಾರ ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದರು.</p>.<p>ಮೌರ್ಯ ಅವರೊಂದಿಗೆ ಶಾಸಕರಾದ ರೋಶನ್ ಲಾಲ್ ವರ್ಮಾ, ಭಗವತಿ ಸಾಗರ್ ಮತ್ತು ಬ್ರಿಜೇಶ್ ಪ್ರಜಾಪತಿ ಅವರೂ ಬಿಜೆಪಿ ಬಿಟ್ಟು ಎಸ್ಪಿಗೆ ಸೇರ್ಪಡೆಗೊಂಡಿದ್ದರು.</p>.<p>ಬಿಜೆಪಿಗೆ ಇಂದು ಮತ್ತೆ ಆಘಾತ ಎದುರಾಗಿದೆ. ಯೋಗಿ ಸರ್ಕಾರದಲ್ಲಿ ಸಚಿವರಾಗಿದ್ದ, ರಜಪೂತ್ ಸಮುದಾಯದ ಪ್ರಬಲ ನಾಯಕ ದಾರಾ ಸಿಂಗ್ ಚೌಹಾಣ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ಬುಧವಾರ ಟ್ವೀಟಿಸಿದೆ. </p>.<p>‘ದಲಿತರು, ಹಿಂದುಳಿದ ಸಮುದಾಯಗಳ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಆದರೆ, ಅವರಿಗೆ ಉತ್ತಮ ಸೇವೆಯನ್ನು ಯೋಗಿ ಸರ್ಕಾರ ನೀಡಲಿಲ್ಲ. ಅದಕ್ಕಾಗಿಯೇ ರಾಜೀನಾಮೆ ನೀಡಿದ್ದೇನೆ. ನನ್ನ ಸಮುದಾಯದವರೊಂದಿಗೆ ಚರ್ಚೆ ನಡೆಸಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದುದಾರಾ ಸಿಂಗ್ ಚೌಹಾಣ್ ತಿಳಿಸಿದ್ದಾರೆ.</p>.<p>403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. </p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/india-news/uttar-pradesh-assembly-election-2022-bjp-facing-major-trouble-of-leaders-immigration-901190.html" target="_blank">ವಿಧಾನಸಭೆ ಚುನಾವಣೆ 2022: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ‘ವಲಸೆ’ ಬಿಸಿ</a></strong></p>.<p><a href="https://www.prajavani.net/india-news/sp-sends-a-lock-to-bjp-office-in-up-says-use-it-after-march-10-901084.html" target="_blank"><strong>ಬಿಜೆಪಿಗೆ ಅಮೆಜಾನ್ನಲ್ಲಿ ಬೀಗ ಬುಕ್ ಮಾಡಿ ಗೇಲಿ ಮಾಡಿದ ಎಸ್ಪಿ </strong></a></p>.<p><a href="https://www.prajavani.net/india-news/up-elections-2022-after-obc-leaders-key-gujjar-leader-quits-bjp-joins-rld-901314.html" target="_blank"><strong>UP Elections 2022: ಒಬಿಸಿ ನಾಯಕರ ಬೆನ್ನಲ್ಲೇ ಬಿಜೆಪಿ ತೊರೆದ ‘ಗುಜ್ಜಾರ್’ ನಾಯಕ </strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>:<strong> </strong>ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ಭಾರಿ ಯತ್ನ ನಡೆಸಿರುವ ಆಡಳಿತಾರೂಢ ಬಿಜೆಪಿಯು ಸರಣಿ ಆಘಾತಗಳನ್ನು ಎದುರಿಸುತ್ತಿದೆ.</p>.<p>ಯೋಗಿ ಆದಿತ್ಯನಾಥ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ, ಪ್ರಭಾವಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಂಗಳವಾರ ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದರು.</p>.<p>ಮೌರ್ಯ ಅವರೊಂದಿಗೆ ಶಾಸಕರಾದ ರೋಶನ್ ಲಾಲ್ ವರ್ಮಾ, ಭಗವತಿ ಸಾಗರ್ ಮತ್ತು ಬ್ರಿಜೇಶ್ ಪ್ರಜಾಪತಿ ಅವರೂ ಬಿಜೆಪಿ ಬಿಟ್ಟು ಎಸ್ಪಿಗೆ ಸೇರ್ಪಡೆಗೊಂಡಿದ್ದರು.</p>.<p>ಬಿಜೆಪಿಗೆ ಇಂದು ಮತ್ತೆ ಆಘಾತ ಎದುರಾಗಿದೆ. ಯೋಗಿ ಸರ್ಕಾರದಲ್ಲಿ ಸಚಿವರಾಗಿದ್ದ, ರಜಪೂತ್ ಸಮುದಾಯದ ಪ್ರಬಲ ನಾಯಕ ದಾರಾ ಸಿಂಗ್ ಚೌಹಾಣ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ಬುಧವಾರ ಟ್ವೀಟಿಸಿದೆ. </p>.<p>‘ದಲಿತರು, ಹಿಂದುಳಿದ ಸಮುದಾಯಗಳ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಆದರೆ, ಅವರಿಗೆ ಉತ್ತಮ ಸೇವೆಯನ್ನು ಯೋಗಿ ಸರ್ಕಾರ ನೀಡಲಿಲ್ಲ. ಅದಕ್ಕಾಗಿಯೇ ರಾಜೀನಾಮೆ ನೀಡಿದ್ದೇನೆ. ನನ್ನ ಸಮುದಾಯದವರೊಂದಿಗೆ ಚರ್ಚೆ ನಡೆಸಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದುದಾರಾ ಸಿಂಗ್ ಚೌಹಾಣ್ ತಿಳಿಸಿದ್ದಾರೆ.</p>.<p>403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. </p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/india-news/uttar-pradesh-assembly-election-2022-bjp-facing-major-trouble-of-leaders-immigration-901190.html" target="_blank">ವಿಧಾನಸಭೆ ಚುನಾವಣೆ 2022: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ‘ವಲಸೆ’ ಬಿಸಿ</a></strong></p>.<p><a href="https://www.prajavani.net/india-news/sp-sends-a-lock-to-bjp-office-in-up-says-use-it-after-march-10-901084.html" target="_blank"><strong>ಬಿಜೆಪಿಗೆ ಅಮೆಜಾನ್ನಲ್ಲಿ ಬೀಗ ಬುಕ್ ಮಾಡಿ ಗೇಲಿ ಮಾಡಿದ ಎಸ್ಪಿ </strong></a></p>.<p><a href="https://www.prajavani.net/india-news/up-elections-2022-after-obc-leaders-key-gujjar-leader-quits-bjp-joins-rld-901314.html" target="_blank"><strong>UP Elections 2022: ಒಬಿಸಿ ನಾಯಕರ ಬೆನ್ನಲ್ಲೇ ಬಿಜೆಪಿ ತೊರೆದ ‘ಗುಜ್ಜಾರ್’ ನಾಯಕ </strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>