ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರದೇಶದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ: ಸಚಿವ ದಾರಾ ಸಿಂಗ್ ಚೌಹಾಣ್ ರಾಜೀನಾಮೆ

Last Updated 15 ಜನವರಿ 2022, 9:23 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ಭಾರಿ ಯತ್ನ ನಡೆಸಿರುವ ಆಡಳಿತಾರೂಢ ಬಿಜೆಪಿಯು ಸರಣಿ ಆಘಾತಗಳನ್ನು ಎದುರಿಸುತ್ತಿದೆ.

ಯೋಗಿ ಆದಿತ್ಯನಾಥ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ, ಪ್ರಭಾವಿ ನಾಯಕ ಸ್ವಾಮಿ ಪ್ರಸಾದ್‌ ಮೌರ್ಯ ಅವರು ಮಂಗಳವಾರ ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರಿದ್ದರು.

ಮೌರ್ಯ ಅವರೊಂದಿಗೆ ಶಾಸಕರಾದ ರೋಶನ್‌ ಲಾಲ್‌ ವರ್ಮಾ, ಭಗವತಿ ಸಾಗರ್‌ ಮತ್ತು ಬ್ರಿಜೇಶ್‌ ಪ್ರಜಾಪತಿ ಅವರೂ ಬಿಜೆಪಿ ಬಿಟ್ಟು ಎಸ್‌ಪಿಗೆ ಸೇರ್ಪಡೆಗೊಂಡಿದ್ದರು.

ಬಿಜೆಪಿಗೆ ಇಂದು ಮತ್ತೆ ಆಘಾತ ಎದುರಾಗಿದೆ. ಯೋಗಿ ಸರ್ಕಾರದಲ್ಲಿ ಸಚಿವರಾಗಿದ್ದ, ರಜಪೂತ್‌ ಸಮುದಾಯದ ಪ್ರಬಲ ನಾಯಕ ದಾರಾ ಸಿಂಗ್ ಚೌಹಾಣ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ಬುಧವಾರ ಟ್ವೀಟಿಸಿದೆ.

‘ದಲಿತರು, ಹಿಂದುಳಿದ ಸಮುದಾಯಗಳ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಆದರೆ, ಅವರಿಗೆ ಉತ್ತಮ ಸೇವೆಯನ್ನು ಯೋಗಿ ಸರ್ಕಾರ ನೀಡಲಿಲ್ಲ. ಅದಕ್ಕಾಗಿಯೇ ರಾಜೀನಾಮೆ ನೀಡಿದ್ದೇನೆ. ನನ್ನ ಸಮುದಾಯದವರೊಂದಿಗೆ ಚರ್ಚೆ ನಡೆಸಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದುದಾರಾ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT