ಮೊದಲ ಪಟ್ಟಿಯಲ್ಲಿ 2017ರ ಉನ್ನಾವೊ ಸಂತ್ರಸ್ತೆಯ ತಾಯಿ ಆಶಾ ದೇವಿ ಅವರಿಗೆ ಟಿಕೆಟ್ ನೀಡಲಾಗಿದೆ. ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲು ನಡೆದ ಹೋರಾಟದ ನೇತೃತ್ವ ವಹಿಸಿದ್ದ ಪೂನಂ ಪಾಂಡೆ ಅವರಿಗೆ ಷಹಜಹಾನ್ಪುರದಿಂದ ಟಿಕೆಟ್ ಘೋಷಿಸಲಾಗಿದೆ. ಸಂಘ ಸಂಸ್ಥೆಗಳಿಂದ ಹಿಡಿದು ಪತ್ರಕರ್ತರ ವರೆಗೂ, ಹೋರಾಟ ನಡೆಸುತ್ತಿರುವ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ ಪ್ರಿಯಾಂಕಾ ಹೇಳಿದ್ದರು.