<p><strong>ಬಂದಾ (ಉತ್ತರ ಪ್ರದೇಶ):</strong> ಗುರುವಾರ ಇಲ್ಲಿನ ಯಮುನಾ ನದಿಯಲ್ಲಿ ದೋಣಿ ಮಗುಚಿ ಬಿದ್ದಿದ್ದು, 25 ಜನರು ನಾಪತ್ತೆಯಾಗಿದ್ದಾರೆ. ಈವರಗೆ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ನೆರವಿಗಾಗಿ ಪ್ರಯಾಗ್ರಾಜ್ನಿಂದ ಮುಳುಗು ತಜ್ಞರನ್ನು ಸಹ ಕರೆಸಲಾಗಿದೆ.</p>.<p>ದುರಂತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ವಿಪಿನ್ ಮಿಶ್ರಾ ತಿಳಿಸಿದ್ದಾರೆ.</p>.<p>ಫತೇಪುರ್ ಜಿಲ್ಲೆಯ ಮರ್ಕಾದಿಂದ ಜರೌಲಿ ಘಾಟ್ಗೆ ತೆರಳುತ್ತಿದ್ದ ದೋಣಿ ಮಗುಚಿ ನದಿಗೆ ಬಿದ್ದಿತ್ತು. ಅದರಲ್ಲಿ 30ಕ್ಕೂ ಹೆಚ್ಚು ಮಂದಿ ಇದ್ದರು.</p>.<p>ಜಿಲ್ಲೆಯ ಮಾರ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಡಿಐಜಿ ಮಿಶ್ರಾ ಶುಕ್ರವಾರ ಳಿಸಿದರು.</p>.<p>‘ಗುರುವಾರ ಮುಳುಗು ತಜ್ಞರು ಮೂರು ಮೃತದೇಹಗಳನ್ನು ಹೊರತೆಗೆದಿದ್ದು, ಇನ್ನೂ 20-25 ಜನರು ನಾಪತ್ತೆಯಾಗಿದ್ದಾರೆ’ಎಂದು ಅವರು ಹೇಳಿದ್ದಾರೆ.</p>.<p>ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಮಾರ್ಕ ಎಸ್ಎಚ್ಒ ಹೇಮರಾಜ್ ಸರೋಜ್ ತಿಳಿಸಿದ್ದಾರೆ. ‘ಅತಿ ವೇಗದ ಗಾಳಿಯಿಂದಾಗಿ, ಬಂಡಾ ಜಿಲ್ಲೆಯ ಗಡಿಯ ಬಳಿ ದೋಣಿ ಮಗುಚಿ ಬಿದ್ದಿದೆ’ ಎಂದು ಅವರು ಹೇಳಿದರು.</p>.<p>ಮೃತರ ಕುಟುಂಬಕ್ಕೆ ವಿಪತ್ತು ಪರಿಹಾರ ನಿಧಿಯಿಂದ ತಲಾ ₹ 4 ಲಕ್ಷ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂದಾ (ಉತ್ತರ ಪ್ರದೇಶ):</strong> ಗುರುವಾರ ಇಲ್ಲಿನ ಯಮುನಾ ನದಿಯಲ್ಲಿ ದೋಣಿ ಮಗುಚಿ ಬಿದ್ದಿದ್ದು, 25 ಜನರು ನಾಪತ್ತೆಯಾಗಿದ್ದಾರೆ. ಈವರಗೆ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ನೆರವಿಗಾಗಿ ಪ್ರಯಾಗ್ರಾಜ್ನಿಂದ ಮುಳುಗು ತಜ್ಞರನ್ನು ಸಹ ಕರೆಸಲಾಗಿದೆ.</p>.<p>ದುರಂತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ವಿಪಿನ್ ಮಿಶ್ರಾ ತಿಳಿಸಿದ್ದಾರೆ.</p>.<p>ಫತೇಪುರ್ ಜಿಲ್ಲೆಯ ಮರ್ಕಾದಿಂದ ಜರೌಲಿ ಘಾಟ್ಗೆ ತೆರಳುತ್ತಿದ್ದ ದೋಣಿ ಮಗುಚಿ ನದಿಗೆ ಬಿದ್ದಿತ್ತು. ಅದರಲ್ಲಿ 30ಕ್ಕೂ ಹೆಚ್ಚು ಮಂದಿ ಇದ್ದರು.</p>.<p>ಜಿಲ್ಲೆಯ ಮಾರ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಡಿಐಜಿ ಮಿಶ್ರಾ ಶುಕ್ರವಾರ ಳಿಸಿದರು.</p>.<p>‘ಗುರುವಾರ ಮುಳುಗು ತಜ್ಞರು ಮೂರು ಮೃತದೇಹಗಳನ್ನು ಹೊರತೆಗೆದಿದ್ದು, ಇನ್ನೂ 20-25 ಜನರು ನಾಪತ್ತೆಯಾಗಿದ್ದಾರೆ’ಎಂದು ಅವರು ಹೇಳಿದ್ದಾರೆ.</p>.<p>ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಮಾರ್ಕ ಎಸ್ಎಚ್ಒ ಹೇಮರಾಜ್ ಸರೋಜ್ ತಿಳಿಸಿದ್ದಾರೆ. ‘ಅತಿ ವೇಗದ ಗಾಳಿಯಿಂದಾಗಿ, ಬಂಡಾ ಜಿಲ್ಲೆಯ ಗಡಿಯ ಬಳಿ ದೋಣಿ ಮಗುಚಿ ಬಿದ್ದಿದೆ’ ಎಂದು ಅವರು ಹೇಳಿದರು.</p>.<p>ಮೃತರ ಕುಟುಂಬಕ್ಕೆ ವಿಪತ್ತು ಪರಿಹಾರ ನಿಧಿಯಿಂದ ತಲಾ ₹ 4 ಲಕ್ಷ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>