ಇದೇ ವೇಳೆ,ಸೇನಾ ಮುಖ್ಯಸ್ಥರು ಮುಖ್ಯಮಂತ್ರಿ ಅವರಿಗೆ ಸ್ಮರಣಿಕೆಯೊಂದನ್ನು ನೀಡಿದರು.
ಪ್ರಧಾನಿ ನರೇಂದ್ರ ಮೊದಿ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸ್ಥಳದಲ್ಲಿ ಬುಧವಾರ ಭೂಮಿ ಪೂಜೆ ನೆರವೇರಿಸಿದ್ದರು. ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿನ ನಿವೇಶನವನ್ನು ದೇವಾಲಯದ ಮಂಡಳಿಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ನವೆಂಬರ್ 9ರಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.