ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಅಪಘಾತ: ಕಾಂಗ್ರೆಸ್ ಮುಖಂಡ ಸಾವು

Last Updated 20 ಡಿಸೆಂಬರ್ 2022, 4:20 IST
ಅಕ್ಷರ ಗಾತ್ರ

ಸುಲ್ತಾನ್‌ಪುರ (ಉತ್ತರ ಪ್ರದೇಶ):ಸುಲ್ತಾನ್‌ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ನೌಶಾದ್‌ ಖಾನ್‌ (42) ಅವರು ರಸ್ತೆ ಅಪಘಾತದಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ನೌಶಾದ್‌ ಅವರ ಕಾರು ಹಾಗೂ ಟ್ರಕ್‌ ನಡುವೆ ಅಪಘಾತವಾಗಿದೆ.

ಈ ಮಾಹಿತಿಯನ್ನು ಪೊಲೀಸರು ಖಚಿತಪಡಿಸಿದ್ದು,ಗೊಸಿಯಾಗಂಜ್‌ ಪ್ರದೇಶದಲ್ಲಿರುವ ತತಿಯಾನಗರ್‌ ಬಳಿ ಅಪಘಾತ ಸಂಭವಿಸಿದೆ.ನೌಶಾದ್‌ ಅವರು ತಮ್ಮ ಕಾರಿನಲ್ಲಿ ಸೋಮವಾರ ಸಂಜೆ ಮನೆಗೆ ಹಿಂದಿರುಗುತ್ತಿದ್ದಾಗ, ಟ್ರಕ್‌ ಡಿಕ್ಕಿ ಹೊಡೆದಿದೆಎಂದು ತಿಳಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಈ ವರೆಗೆ ಯಾರೊಬ್ಬರನ್ನೂ ಬಂಧಿಸಿಲ್ಲ.

ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕವು, ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT