‘ಅಮಿತ್ ಶಾ, ರಾಜನಾಥ್ ಸಿಂಗ್, ಜೆಪಿ ನಡ್ಡಾ, ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಅನೇಕ ಬಿಜೆಪಿ ನಾಯಕರ ಜತೆ ನಮ್ಮ ಪಕ್ಷದ ಸಹೋದ್ಯೋಗಿ ಆರ್.ಸಿ.ಪಿ. ಸಿಂಗ್ ಮಾತುಕತೆ ನಡೆಸಿದ್ದರು. ಯಾವ ಹಂತದಲ್ಲಿಯೂ ಅವರೆಲ್ಲ ನಮ್ಮೊಂದಿಗೆ ಮೈತ್ರಿಯನ್ನು ನಿರಾಕರಿಸಿಲ್ಲ. ಆದರೆ, ಮೂರು ದಿನಗಳ ಹಿಂದೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದಾಗ ಅಪ್ನಾ ದಳ ಮತ್ತು ನಿಷಾದ್ ಪಕ್ಷವನ್ನು ಮಿತ್ರ ಪಕ್ಷಗಳೆಂದು ಕರೆದರು. ಜೆಡಿ(ಯು) ಅವರ ಮಿತ್ರಪಕ್ಷವಲ್ಲ ಎಂಬುದನ್ನು ಅವರು ಈ ಮೂಲಕ ಸ್ಪಷ್ಟಪಡಿಸಿದರು. ಈ ಕುರಿತು ನಾವೇನೂ ಕೋಪಗೊಂಡಿಲ್ಲ. ನಾವು ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ’ ಎಂದು ತ್ಯಾಗಿ ಹೇಳಿದ್ದಾರೆ.