<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಮೈತ್ರಿಯು ಮತ ಎಣಿಕೆಯವರೆಗೆ ಮಾತ್ರ ಇರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.</p>.<p>ಮುಜಾಫರ್ನಗರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ‘ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಸರ್ಕಾರ ರಚಿಸಿದರೆ, ಅಜಂ ಖಾನ್ ಸಂಪುಟದ ಭಾಗವಾಗಲಿದ್ದಾರೆ. ಆರ್ಎಲ್ಡಿ ಅಧ್ಯಕ್ಷ ಜಯಂತ್ ಚೌಧರಿ ಹೊರಗೆ ಇರಲಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಸಮಾಜವಾದಿ ಹಾಗೂ ಬಹುಜನ ಸಮಾಜ ಪಕ್ಷಗಳ ಆಡಳಿತದಲ್ಲಿ ಉತ್ತರ ಪ್ರದೇಶವನ್ನು ಮಾಫಿಯಾಗಳು ವಶಪಡಿಸಿಕೊಂಡಿದ್ದವು. ಧರ್ಮ ಮತ್ತು ಜಾತಿಯ ಆಧಾರದ ಮೇಲೆ ರಾಜಕೀಯ ಮಾಡಿದವರು ಇಲ್ಲಿ ಪ್ರಾಬಲ್ಯ ಹೊಂದಿದ್ದರು’ ಎಂದು ಕೇಂದ್ರ ಗೃಹ ಸಚಿವರು ವಾಗ್ದಾಳಿ ನಡೆಸಿದ್ದಾರೆ.</p>.<p>‘ಉಭಯ ಪಕ್ಷಗಳ ಪೈಕಿ ಯಾರಾದರೂ ಮತ್ತೆ ಸರ್ಕಾರ ರಚಿಸಿದರೆ ಯುಪಿಯಲ್ಲಿ ಮಾಫಿಯಾ ರಾಜ್ ಮರಳಲಿದೆ. ಆದರೆ, ನೀವು ಬಿಜೆಪಿಗೆ ಮತ ಹಾಕಿದರೆ ಉತ್ತರ ಪ್ರದೇಶ ಭಾರತದ ನಂಬರ್ ಒನ್ ರಾಜ್ಯವಾಗಿ ಹೊರಹೊಮ್ಮಲಿದೆ’ ಎಂದು ಶಾ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಸಮಾಜವಾದಿ ಪಕ್ಷದೊಂದಿಗೆ ರಾಷ್ಟ್ರೀಯ ಲೋಕದಳ ಮೈತ್ರಿ ಮಾಡಿಕೊಂಡಿದೆ. ರಾಷ್ಟ್ರೀಯ ಲೋಕದಳವು ಪಶ್ಚಿಮ ಯುಪಿಯಲ್ಲಿ ಪ್ರಾಬಲ್ಯ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಮೈತ್ರಿಯು ಮತ ಎಣಿಕೆಯವರೆಗೆ ಮಾತ್ರ ಇರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.</p>.<p>ಮುಜಾಫರ್ನಗರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ‘ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಸರ್ಕಾರ ರಚಿಸಿದರೆ, ಅಜಂ ಖಾನ್ ಸಂಪುಟದ ಭಾಗವಾಗಲಿದ್ದಾರೆ. ಆರ್ಎಲ್ಡಿ ಅಧ್ಯಕ್ಷ ಜಯಂತ್ ಚೌಧರಿ ಹೊರಗೆ ಇರಲಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಸಮಾಜವಾದಿ ಹಾಗೂ ಬಹುಜನ ಸಮಾಜ ಪಕ್ಷಗಳ ಆಡಳಿತದಲ್ಲಿ ಉತ್ತರ ಪ್ರದೇಶವನ್ನು ಮಾಫಿಯಾಗಳು ವಶಪಡಿಸಿಕೊಂಡಿದ್ದವು. ಧರ್ಮ ಮತ್ತು ಜಾತಿಯ ಆಧಾರದ ಮೇಲೆ ರಾಜಕೀಯ ಮಾಡಿದವರು ಇಲ್ಲಿ ಪ್ರಾಬಲ್ಯ ಹೊಂದಿದ್ದರು’ ಎಂದು ಕೇಂದ್ರ ಗೃಹ ಸಚಿವರು ವಾಗ್ದಾಳಿ ನಡೆಸಿದ್ದಾರೆ.</p>.<p>‘ಉಭಯ ಪಕ್ಷಗಳ ಪೈಕಿ ಯಾರಾದರೂ ಮತ್ತೆ ಸರ್ಕಾರ ರಚಿಸಿದರೆ ಯುಪಿಯಲ್ಲಿ ಮಾಫಿಯಾ ರಾಜ್ ಮರಳಲಿದೆ. ಆದರೆ, ನೀವು ಬಿಜೆಪಿಗೆ ಮತ ಹಾಕಿದರೆ ಉತ್ತರ ಪ್ರದೇಶ ಭಾರತದ ನಂಬರ್ ಒನ್ ರಾಜ್ಯವಾಗಿ ಹೊರಹೊಮ್ಮಲಿದೆ’ ಎಂದು ಶಾ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಸಮಾಜವಾದಿ ಪಕ್ಷದೊಂದಿಗೆ ರಾಷ್ಟ್ರೀಯ ಲೋಕದಳ ಮೈತ್ರಿ ಮಾಡಿಕೊಂಡಿದೆ. ರಾಷ್ಟ್ರೀಯ ಲೋಕದಳವು ಪಶ್ಚಿಮ ಯುಪಿಯಲ್ಲಿ ಪ್ರಾಬಲ್ಯ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>