ಬೆಳಗ್ಗೆ 5.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ಹೇಳಿರುವ ಎಸ್ಎಸ್ಪಿ ಶೈಲೇಶ್ ಕುಮಾರ್ ಪಾಂಡೆ,ಜಿಲ್ಲೆಯಲ್ಲಿನ ಅಗ್ನಿಶಾಮಕ ವಾಹನಗಳು, ಪಕ್ಕದಜಿಲ್ಲೆಗಳಾದ ಪ್ರತಾಪಗಢ ಮತ್ತು ಕೌಶಂಬಿಯಿಂದಲೂ ಅಗ್ನಿಶಾಮಕ ದಳ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಜೊತೆಗೆ ಸೇನೆ ಹಾಗೂ ವಾಯುಪಡೆಯ ಅಗ್ನಿಶಾಮಕ ಸಿಬ್ಬಂದಿಯೂ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.