‘ಪ್ರಧಾನಿ ಅವರ ನಿರ್ಧಾರವು ಕೋವಿಡ್ನ ಉತ್ತಮ ನಿರ್ವಹಣೆಗೆ ಸಹಾಯ ಮಾಡುತ್ತದೆ. ಬೃಹತ್ ಲಸಿಕಾ ಅಭಿಯಾನವು ಕರೋನ ವೈರಸ್ ಅನ್ನು ಸೋಲಿಸಲು ನೆರವಾಗುತ್ತದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ಹಾಕಲು ನಾವು ನಿರ್ಧರಿಸಿದ್ದೇವೆ. ರಾಜ್ಯ ಸರ್ಕಾರವು ತನ್ನದೇ ಆದ ಸಂಪನ್ಮೂಲಗಳೊಂದಿಗೆ ಲಸಿಕೆ ಕಾರ್ಯಕ್ರಮದಲ್ಲಿ ಮುಂದಡಿ ಇಡಲಿದೆ’ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.