’ಲಾಕ್ಡೌನ್ ಸಮಯದಲ್ಲಿ, ಲಕ್ಷಾಂತರ ಕಾರ್ಮಿಕರು ದೆಹಲಿಯಿಂದ ಉತ್ತರ ಪ್ರದೇಶದ ತಮ್ಮ ಹಳ್ಳಿಗಳಿಗೆ ಕಾಲ್ನಡಿಗೆಯಲ್ಲಿ ಹಿಂದಿರುಗುತ್ತಿದ್ದಾಗ ಬಿಜೆಪಿ ಸರ್ಕಾರ ಅವರಿಗೆ ಬಸ್ ವ್ಯವಸ್ಥೆ ಮಾಡಲಿಲ್ಲ. ಆದರೆ, ಪ್ರಧಾನಿ ಮತ್ತು ಗೃಹ ಸಚಿವರ ಕಾರ್ಯಕ್ರಮಗಳಿಗೆ ಜನ ಸೇರಿಸಲು ಸರ್ಕಾರ ಕೋಟಿಗಟ್ಟಲೆ ಸಾರ್ವಜನಿಕರ ಹಣವನ್ನು ವೆಚ್ಚ ಮಾಡುತ್ತಿದೆ’ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.