<p><strong>ಶಹಜಹಾನ್ಪುರ:</strong> ಹಾವಿನೊಂದಿಗೆ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಉರಗ ತಜ್ಞರೊಬ್ಬರು ಅದರ ಕಡಿತಕ್ಕೊಳಪಟ್ಟು ಮೃತಪಟ್ಟ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ನಡೆದಿದೆ.</p>.<p>ಮೃತರನ್ನು ಮರುವಝಾಲ ಗ್ರಾಮದ ದೇವೇಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ.</p>.<p>ಹಾವುಗಳ ರಕ್ಷಣೆ ಮಾಡುವುದರಲ್ಲಿ ನಿಷ್ಣಾತರಾಗಿದ್ದ ಮಿಶ್ರಾ ಅವರು ಅದೇ ವಿಚಾರದಲ್ಲಿ ಗ್ರಾಮದಲ್ಲಿ ಪ್ರಸಿದ್ಧಿ ಹೊಂದಿದ್ದರು. 200ಕ್ಕೂ ಹೆಚ್ಚು ಹಾವುಗಳನ್ನು ಹಿಡಿದಿದ್ದರು. ಹಾವೊಂದನ್ನು ಹಿಡಿದು ವಿಡಿಯೊ ಮಾಡಿಕೊಳ್ಳುತ್ತಿದ್ದಾಗ ಅದು ಕಚ್ಚಿದೆ ಎಂದು ವರದಿಯಾಗಿದೆ.</p>.<p><a href="https://www.prajavani.net/india-news/nitin-gadkari-attributes-bjps-rise-to-power-to-efforts-of-atal-bihar-vajpayee-lk-advani-965392.html" itemprop="url">ಬಿಜೆಪಿ ಅಧಿಕಾರಕ್ಕೆ ಬರಲು ವಾಜಪೇಯಿ, ಅಡ್ವಾಣಿ ಶ್ರಮವೇ ಕಾರಣ: ನಿತಿನ್ ಗಡ್ಕರಿ </a></p>.<p>ವಿಷಕಾರಿ ಹಾವೊಂದನ್ನು ಹಿಡಿದಿದ್ದ ಮಿಶ್ರಾ ಅದನ್ನು ಕುತ್ತಿಗೆಗೆ ಸುತ್ತಿಕೊಂಡು ವಿಡಿಯೊಗೆ ಪೋಸ್ ಕೊಟ್ಟಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಐದು ವರ್ಷ ವಯಸ್ಸಿನ ಬಾಲಕಿಯೊಬ್ಬಳ ಕುತ್ತಿಗೆಗೂ ಹಾವನ್ನು ಸುತ್ತಿ ತೋರಿಸಿದ್ದಾರೆ ಎನ್ನಲಾಗಿದೆ.</p>.<p>ವಿಡಿಯೊ ಚಿತ್ರೀಕರಣದ ವೇಳೆ ಮಿಶ್ರಾ ಅವರಿಗೆ ಹಾವು ಕಚ್ಚಿದೆ. ಇದರ ಬೆನ್ನಲ್ಲೇ, ಹಾವನ್ನು ಬುಟ್ಟಿಯೊಂದರಲ್ಲಿ ಮುಚ್ಚಿಟ್ಟ ಮಿಶ್ರಾ ಅವರು ಹಲವು ಗಿಡ–ಮೂಲಿಕೆಗಳ ಔಷಧದಿಂದ ಸ್ವಯಂ ಚಿಕಿತ್ಸೆ ಪಡೆದುಕೊಂಡರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟರು ಎನ್ನಲಾಗಿದೆ.</p>.<p><a href="https://www.prajavani.net/india-news/keshav-prasad-mauryas-tweet-creates-furore-in-uttar-pradesh-politics-965406.html" itemprop="url">ಉತ್ತರ ಪ್ರದೇಶ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾದ ಕೇಶವ ಪ್ರಸಾದ್ ಮೌರ್ಯ ಟ್ವೀಟ್ </a></p>.<p>ಇದಾದ ಕೆಲವು ಗಂಟೆಗಳ ನಂತರ ಬುಟ್ಟಿಯನ್ನು ತೆರೆದು ನೋಡಿದಾಗ ಹಾವು ಕೂಡ ಮೃತಪಟ್ಟಿರುವುದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಜಹಾನ್ಪುರ:</strong> ಹಾವಿನೊಂದಿಗೆ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಉರಗ ತಜ್ಞರೊಬ್ಬರು ಅದರ ಕಡಿತಕ್ಕೊಳಪಟ್ಟು ಮೃತಪಟ್ಟ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ನಡೆದಿದೆ.</p>.<p>ಮೃತರನ್ನು ಮರುವಝಾಲ ಗ್ರಾಮದ ದೇವೇಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ.</p>.<p>ಹಾವುಗಳ ರಕ್ಷಣೆ ಮಾಡುವುದರಲ್ಲಿ ನಿಷ್ಣಾತರಾಗಿದ್ದ ಮಿಶ್ರಾ ಅವರು ಅದೇ ವಿಚಾರದಲ್ಲಿ ಗ್ರಾಮದಲ್ಲಿ ಪ್ರಸಿದ್ಧಿ ಹೊಂದಿದ್ದರು. 200ಕ್ಕೂ ಹೆಚ್ಚು ಹಾವುಗಳನ್ನು ಹಿಡಿದಿದ್ದರು. ಹಾವೊಂದನ್ನು ಹಿಡಿದು ವಿಡಿಯೊ ಮಾಡಿಕೊಳ್ಳುತ್ತಿದ್ದಾಗ ಅದು ಕಚ್ಚಿದೆ ಎಂದು ವರದಿಯಾಗಿದೆ.</p>.<p><a href="https://www.prajavani.net/india-news/nitin-gadkari-attributes-bjps-rise-to-power-to-efforts-of-atal-bihar-vajpayee-lk-advani-965392.html" itemprop="url">ಬಿಜೆಪಿ ಅಧಿಕಾರಕ್ಕೆ ಬರಲು ವಾಜಪೇಯಿ, ಅಡ್ವಾಣಿ ಶ್ರಮವೇ ಕಾರಣ: ನಿತಿನ್ ಗಡ್ಕರಿ </a></p>.<p>ವಿಷಕಾರಿ ಹಾವೊಂದನ್ನು ಹಿಡಿದಿದ್ದ ಮಿಶ್ರಾ ಅದನ್ನು ಕುತ್ತಿಗೆಗೆ ಸುತ್ತಿಕೊಂಡು ವಿಡಿಯೊಗೆ ಪೋಸ್ ಕೊಟ್ಟಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಐದು ವರ್ಷ ವಯಸ್ಸಿನ ಬಾಲಕಿಯೊಬ್ಬಳ ಕುತ್ತಿಗೆಗೂ ಹಾವನ್ನು ಸುತ್ತಿ ತೋರಿಸಿದ್ದಾರೆ ಎನ್ನಲಾಗಿದೆ.</p>.<p>ವಿಡಿಯೊ ಚಿತ್ರೀಕರಣದ ವೇಳೆ ಮಿಶ್ರಾ ಅವರಿಗೆ ಹಾವು ಕಚ್ಚಿದೆ. ಇದರ ಬೆನ್ನಲ್ಲೇ, ಹಾವನ್ನು ಬುಟ್ಟಿಯೊಂದರಲ್ಲಿ ಮುಚ್ಚಿಟ್ಟ ಮಿಶ್ರಾ ಅವರು ಹಲವು ಗಿಡ–ಮೂಲಿಕೆಗಳ ಔಷಧದಿಂದ ಸ್ವಯಂ ಚಿಕಿತ್ಸೆ ಪಡೆದುಕೊಂಡರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟರು ಎನ್ನಲಾಗಿದೆ.</p>.<p><a href="https://www.prajavani.net/india-news/keshav-prasad-mauryas-tweet-creates-furore-in-uttar-pradesh-politics-965406.html" itemprop="url">ಉತ್ತರ ಪ್ರದೇಶ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾದ ಕೇಶವ ಪ್ರಸಾದ್ ಮೌರ್ಯ ಟ್ವೀಟ್ </a></p>.<p>ಇದಾದ ಕೆಲವು ಗಂಟೆಗಳ ನಂತರ ಬುಟ್ಟಿಯನ್ನು ತೆರೆದು ನೋಡಿದಾಗ ಹಾವು ಕೂಡ ಮೃತಪಟ್ಟಿರುವುದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>