ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿನಿಂದ ಉತ್ತರ ಪ್ರದೇಶ ಸಚಿವ ವಿಜಯ್‌ ಕಶ್ಯಪ್‌ ಸಾವು: ಪ್ರಧಾನಿ ಕಂಬನಿ

Last Updated 19 ಮೇ 2021, 2:06 IST
ಅಕ್ಷರ ಗಾತ್ರ

ಲಕ್ನೋ: ಉತ್ತರ ಪ್ರದೇಶ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್‌ ಕಶ್ಯಪ್‌ ಅವರು ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ.

ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಶ್ಯಪ್‌ ಅವರಿಗೆ 52 ವರ್ಷ ವಯಸ್ಸಾಗಿತ್ತು. ಕೋವಿಡ್‌-19 ಎರಡನೇ ಅಲೆಯಲ್ಲಿ ಸೋಂಕಿನಿಂದ ಮೃತರಾದ ಉತ್ತರ ಪ್ರದೇಶದ ಐದನೇ ಬಿಜೆಪಿ ಶಾಸಕರು ಇವರಾಗಿದ್ದಾರೆ.

ಕಶ್ಯಪ್‌ ಅವರ ಸಾವಿಗೆ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ, 'ಬಿಜೆಪಿ ಮುಖಂಡ ಹಾಗೂ ಉತ್ತರ ಪ್ರದೇಶ ಸಚಿವ ವಿಜಯ್ ಕಶ್ಯಪ್ ಅವರ ನಿಧನದ ಸುದ್ದಿಯಿಂದ ಬೇಸರವಾಗಿದೆ. ಅವರು ತಮ್ಮ ಜೀವನವನ್ನು ಸಾರ್ವಜನಿಕರಿಗೆ ಮುಡಿಪಾಗಿಟ್ಟಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT