ಲಕ್ನೋ: ಉತ್ತರ ಪ್ರದೇಶ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್ ಕಶ್ಯಪ್ ಅವರು ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ.
ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಶ್ಯಪ್ ಅವರಿಗೆ 52 ವರ್ಷ ವಯಸ್ಸಾಗಿತ್ತು. ಕೋವಿಡ್-19 ಎರಡನೇ ಅಲೆಯಲ್ಲಿ ಸೋಂಕಿನಿಂದ ಮೃತರಾದ ಉತ್ತರ ಪ್ರದೇಶದ ಐದನೇ ಬಿಜೆಪಿ ಶಾಸಕರು ಇವರಾಗಿದ್ದಾರೆ.
ಕಶ್ಯಪ್ ಅವರ ಸಾವಿಗೆ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ, 'ಬಿಜೆಪಿ ಮುಖಂಡ ಹಾಗೂ ಉತ್ತರ ಪ್ರದೇಶ ಸಚಿವ ವಿಜಯ್ ಕಶ್ಯಪ್ ಅವರ ನಿಧನದ ಸುದ್ದಿಯಿಂದ ಬೇಸರವಾಗಿದೆ. ಅವರು ತಮ್ಮ ಜೀವನವನ್ನು ಸಾರ್ವಜನಿಕರಿಗೆ ಮುಡಿಪಾಗಿಟ್ಟಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಟ್ವೀಟ್ ಮಾಡಿದ್ದಾರೆ.
Sad to hear about the passing away of BJP leader and Uttar Pradesh minister Vijay Kashyap. He was a leader associated with the land and was always devoted to the public. My condolences to his family: Prime Minister Narendra Modi pic.twitter.com/RfR8dBWULL