ಮಂಗಳವಾರದ ಸಂಪುಟ ಸಭೆಯ ಬಳಿಕ ಐಎಎಸ್, ಐಪಿಎಸ್ ಹಾಗೂ ಪ್ರಾಂತೀಯ ನಾಗರಿಕ ಸೇವಾ ಅಧಿಕಾರಿಗಳೊಡನೆ ವಿಶೇಷ ಸಭೆ ನಡೆಸಿದ ಅವರು, ‘ಸಚಿವರ ಕುಟುಂಬ ಸದಸ್ಯರು ಯಾವುದೇಸರ್ಕಾರದ ಕೆಲಸಗಳಲ್ಲಿ ಮೂಗು ತೂರಿಸಬಾರದು. ಆರೋಗ್ಯಕರ ಪ್ರಜಾಪ್ರಭುತ್ವಕ್ಕಾಗಿ ಪ್ರಜಾಪ್ರತಿನಿಧಿಗಳ ಪಾತ್ರ ಬಹುಮುಖ್ಯವಾಗಿರುತ್ತದೆ. ಆದ್ದರಿಂದ ಪ್ರಮಾಣವಚನ ಸ್ವೀಕಾರದ ಬಳಿಕ ಎಲ್ಲ ಸಚಿವರೂ ತಮ್ಮ ಹಾಗೂ ತಮ್ಮ ಕುಟುಂಬದ ಸ್ಥಿರಾಸ್ತಿ ಹಾಗೂ ಚರಾಸ್ತಿಗಳನ್ನು ಆನ್ಲೈನ್ ಪೋರ್ಟಲ್ನಲ್ಲಿ ಘೋಷಿಸಬೇಕು’ ಎಂದು ಹೇಳಿದರು.