ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ. ಪ್ರದೇಶ: ಸಚಿವರಿಗೆ ಆಸ್ತಿ ಘೋಷಿಸಲು ಸೂಚಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌

Last Updated 26 ಏಪ್ರಿಲ್ 2022, 14:28 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶ ಸರ್ಕಾರದ ಎಲ್ಲ ಸಚಿವರು ಹಾಗೂಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿಯನ್ನು ಮೂರು ತಿಂಗಳೊಳಗಾಗಿ ಸರ್ಕಾರದ ಆನ್‌ಲೈನ್‌ ಪೋರ್ಟಲ್‌ನಲ್ಲಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೂಚಿಸಿದ್ದಾರೆ.

ಮಂಗಳವಾರದ ಸಂಪುಟ ಸಭೆಯ ಬಳಿಕ ಐಎಎಸ್‌, ಐಪಿಎಸ್‌ ಹಾಗೂ ಪ್ರಾಂತೀಯ ನಾಗರಿಕ ಸೇವಾ ಅಧಿಕಾರಿಗಳೊಡನೆ ವಿಶೇಷ ಸಭೆ ನಡೆಸಿದ ಅವರು, ‘ಸಚಿವರ ಕುಟುಂಬ ಸದಸ್ಯರು ಯಾವುದೇಸರ್ಕಾರದ ಕೆಲಸಗಳಲ್ಲಿ ಮೂಗು ತೂರಿಸಬಾರದು. ಆರೋಗ್ಯಕರ ಪ್ರಜಾಪ್ರಭುತ್ವಕ್ಕಾಗಿ ಪ್ರಜಾಪ್ರತಿನಿಧಿಗಳ ಪಾತ್ರ ಬಹುಮುಖ್ಯವಾಗಿರುತ್ತದೆ. ಆದ್ದರಿಂದ ಪ್ರಮಾಣವಚನ ಸ್ವೀಕಾರದ ಬಳಿಕ ಎಲ್ಲ ಸಚಿವರೂ ತಮ್ಮ ಹಾಗೂ ತಮ್ಮ ಕುಟುಂಬದ ಸ್ಥಿರಾಸ್ತಿ ಹಾಗೂ ಚರಾಸ್ತಿಗಳನ್ನು ಆನ್‌ಲೈನ್‌ ಪೋರ್ಟಲ್‌ನಲ್ಲಿ ಘೋಷಿಸಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT