<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕಾರಣಿಗಳು ಈಗ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.</p>.<p>ವಿಧಾನಸಭೆ ಚುನಾವಣೆ ನಡೆಯಲು ಇನ್ನೂ ಏಳು ತಿಂಗಳು ಉಳಿದಿವೆ. ಚುನಾವಣೆಗೆ ಸಿದ್ಧತೆ ಕೈಗೊಳ್ಳುತ್ತಿರುವ ಬಿಜೆಪಿ, ಬಿಎಸ್ಪಿ, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಮುಖಂಡರು ಈಗಿನಿಂದಲೇ ದೇವಸ್ಥಾನಗಳಿಗೆ ಮತ್ತು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಕೋರುತ್ತಿದ್ದಾರೆ.</p>.<p>ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಮಿಶ್ರಾ ಸೇರಿದಂತೆ ಪಕ್ಷದ ಹಲವು ನಾಯಕರು ಶುಕ್ರವಾರ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ ಮತ್ತು ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಿದ್ದರು. ಮಿಶ್ರಾ ಅವರು ಪ್ರಮುಖ ಸ್ವಾಮೀಜಿಗಳ ಆಶ್ರಮಗಳಿಗೂ ಭೇಟಿ ನೀಡಿದ್ದರು.</p>.<p>ಶನಿವಾರ ಬಿಜೆಪಿ ಶಾಸಕರು, ನಾಯಕರು, ಪದಾಧಿಕಾರಿಗಳು ಇದೇ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ರಾಜ್ಯದಾದ್ಯಂತ ಸ್ವಾಮೀಜಿಗಳನ್ನು ಸನ್ಮಾನಿಸಿದ ಪಕ್ಷದ ಮುಖಂಡರು, ಆಶ್ರಮಗಳು, ದೇವಾಲಯಗಳಿಗೆ ಭೇಟಿ ನೀಡಿದ್ದರು. ಜತೆಗೆ, ವಿಶೇಷ ಪೂಜೆಗಳನ್ನು ಸಹ ಹಮ್ಮಿಕೊಂಡಿದ್ದರು.</p>.<p>ವಾರಾಣಸಿಯ ಪ್ರಸಿದ್ಧ ’ಬಾತುಕ್ ಭೈರವ್’ ದೇವಸ್ಥಾನದಲ್ಲಿ ಬಿಜೆಪಿ ನಾಯಕರು ‘ತಾಂತ್ರಿಕ್’ ಪೂಜೆಯನ್ನು ಹಮ್ಮಿಕೊಂಡಿದ್ದರು ಎಂದು ವರದಿಯಾಗಿದೆ. ‘ಬಾತುಕ್ ಭೈರವ್’ ದೇವಸ್ಥಾನದಲ್ಲಿ ದೇವರಿಗೆ ಮದ್ಯವನ್ನು ಅರ್ಪಿಸಲಾಗುತ್ತಿದೆ.</p>.<p>ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ ವಾರಾಣಸಿಗೆ ಶೀಘ್ರ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಆ ಪಕ್ಷಗಳ ಮುಖಂಡರು ತಿಳಿಸಿದ್ದಾರೆ.</p>.<p>’ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ದೇವಸ್ಥಾನಗಳಿಗೆ ಪ್ರದಕ್ಷಿಣೆ ಹಾಕುವುದು ಸಾಮಾನ್ಯ. ತಾವು ದೇವರಿಗೆ ಹೆದರುತ್ತೇವೆ ಎನ್ನುವ ಸಂದೇಶ ರವಾನಿಸುವ ಪ್ರಯತ್ನವನ್ನು ರಾಜಕಾರಣಿಗಳು ಮಾಡುತ್ತಾರೆ’ ಎಂದು ಲಖನೌದ ರಾಜಕೀಯ ವಿಶ್ಲೇಷಕ ಜೆ.ಪಿ. ಶುಕ್ಲಾ ಅಭಿಪ್ರಾಯಪಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕಾರಣಿಗಳು ಈಗ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.</p>.<p>ವಿಧಾನಸಭೆ ಚುನಾವಣೆ ನಡೆಯಲು ಇನ್ನೂ ಏಳು ತಿಂಗಳು ಉಳಿದಿವೆ. ಚುನಾವಣೆಗೆ ಸಿದ್ಧತೆ ಕೈಗೊಳ್ಳುತ್ತಿರುವ ಬಿಜೆಪಿ, ಬಿಎಸ್ಪಿ, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಮುಖಂಡರು ಈಗಿನಿಂದಲೇ ದೇವಸ್ಥಾನಗಳಿಗೆ ಮತ್ತು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಕೋರುತ್ತಿದ್ದಾರೆ.</p>.<p>ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಮಿಶ್ರಾ ಸೇರಿದಂತೆ ಪಕ್ಷದ ಹಲವು ನಾಯಕರು ಶುಕ್ರವಾರ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ ಮತ್ತು ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಿದ್ದರು. ಮಿಶ್ರಾ ಅವರು ಪ್ರಮುಖ ಸ್ವಾಮೀಜಿಗಳ ಆಶ್ರಮಗಳಿಗೂ ಭೇಟಿ ನೀಡಿದ್ದರು.</p>.<p>ಶನಿವಾರ ಬಿಜೆಪಿ ಶಾಸಕರು, ನಾಯಕರು, ಪದಾಧಿಕಾರಿಗಳು ಇದೇ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ರಾಜ್ಯದಾದ್ಯಂತ ಸ್ವಾಮೀಜಿಗಳನ್ನು ಸನ್ಮಾನಿಸಿದ ಪಕ್ಷದ ಮುಖಂಡರು, ಆಶ್ರಮಗಳು, ದೇವಾಲಯಗಳಿಗೆ ಭೇಟಿ ನೀಡಿದ್ದರು. ಜತೆಗೆ, ವಿಶೇಷ ಪೂಜೆಗಳನ್ನು ಸಹ ಹಮ್ಮಿಕೊಂಡಿದ್ದರು.</p>.<p>ವಾರಾಣಸಿಯ ಪ್ರಸಿದ್ಧ ’ಬಾತುಕ್ ಭೈರವ್’ ದೇವಸ್ಥಾನದಲ್ಲಿ ಬಿಜೆಪಿ ನಾಯಕರು ‘ತಾಂತ್ರಿಕ್’ ಪೂಜೆಯನ್ನು ಹಮ್ಮಿಕೊಂಡಿದ್ದರು ಎಂದು ವರದಿಯಾಗಿದೆ. ‘ಬಾತುಕ್ ಭೈರವ್’ ದೇವಸ್ಥಾನದಲ್ಲಿ ದೇವರಿಗೆ ಮದ್ಯವನ್ನು ಅರ್ಪಿಸಲಾಗುತ್ತಿದೆ.</p>.<p>ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ ವಾರಾಣಸಿಗೆ ಶೀಘ್ರ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಆ ಪಕ್ಷಗಳ ಮುಖಂಡರು ತಿಳಿಸಿದ್ದಾರೆ.</p>.<p>’ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ದೇವಸ್ಥಾನಗಳಿಗೆ ಪ್ರದಕ್ಷಿಣೆ ಹಾಕುವುದು ಸಾಮಾನ್ಯ. ತಾವು ದೇವರಿಗೆ ಹೆದರುತ್ತೇವೆ ಎನ್ನುವ ಸಂದೇಶ ರವಾನಿಸುವ ಪ್ರಯತ್ನವನ್ನು ರಾಜಕಾರಣಿಗಳು ಮಾಡುತ್ತಾರೆ’ ಎಂದು ಲಖನೌದ ರಾಜಕೀಯ ವಿಶ್ಲೇಷಕ ಜೆ.ಪಿ. ಶುಕ್ಲಾ ಅಭಿಪ್ರಾಯಪಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>