ನವದೆಹಲಿ: ಜನರು ಮನೆಗಳಿಂದ ಹೊರಬಂದು ಮತ ಚಲಾಯಿಸುವ ಮೂಲಕ ದೇಶವನ್ನು ಎಲ್ಲಾ ಭಯಗಳಿಂದ ಮುಕ್ತಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇಂದು (ಫೆ.10) ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಈ ಹಿನ್ನೆಲೆಯಲ್ಲಿ ಮತದಾರರನ್ನುದ್ದೇಶಿಸಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್, 'ದೇಶವನ್ನು ಎಲ್ಲ ಆತಂಕಗಳಿಂದ ಮುಕ್ತಗೊಳಿಸಿ. ಹೊರಗೆ ಬಂದು ಮತ ಚಲಾಯಿಸಿ' ಎಂದು ಮನವಿ ಮಾಡಿದ್ದಾರೆ.
ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳಾದ ಶಾಮ್ಲಿ, ಹಾಪುರ್, ಗೌತಮ ಬುದ್ಧ ನಗರ, ಮುಜಾಫರ್ನಗರ, ಮೀರತ್, ಬಾಗ್ಪತ್, ಗಾಜಿಯಾಬಾದ್, ಬುಲಂದ್ಶಹರ್, ಅಲಿಗಢ, ಮಥುರಾ ಮತ್ತು ಆಗ್ರಾದ ಒಟ್ಟು 58 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.