<p><strong>ಲಖನೌ:</strong> ಪರೀಕ್ಷೆಯಲ್ಲಿ ಅಕ್ಷರಗಳನ್ನು ತಪ್ಪಾಗಿ ಬರೆದದಲಿತ ವಿದ್ಯಾರ್ಥಿಗೆ ಸಾಯುವಂತೆ ಥಳಿಸಿದ ಶಿಕ್ಷಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p>ಮೃತ ವಿದ್ಯಾರ್ಥಿನಿಖಿಲ್ ದೋಹ್ರೆ, ಔರೈಯ ಜಿಲ್ಲೆಯ ವೈಶೋಲಿ ಗ್ರಾಮದವನಾಗಿದ್ದು, ಅಚಲ್ಡಾ ಪೊಲೀಸ್ ಠಾಣೆ ವ್ಯಾಪ್ತಿಯ ಫಾನ್ಫುಡ್ ರಸ್ತೆಯಲ್ಲಿರುವ ಆದರ್ಶ ಇಂಟರ್ ಕಾಲೇಜು ಸಂಸ್ಥೆಯ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.</p>.<p>ವಿದ್ಯಾರ್ಥಿಯು ಪರೀಕ್ಷೆಯ ಒಎಂಆರ್ ಶೀಟ್ ಭರ್ತಿ ಮಾಡುವಾಗ ತಪ್ಪು ಮಾಡಿದ್ದ ಮತ್ತು ಉತ್ತರ ಪತ್ರಿಕೆಯಲ್ಲಿ 'ಸಮಾಜಿಕ್' (ಸಾಮಾಜಿಕ) ಪದವನ್ನು 'ಸಮಾಜಕ್' ಎಂದು ಬರೆದಿದ್ದ. ಇಷ್ಟಕ್ಕೇ ಕೋಪಗೊಂಡು ಶಿಕ್ಷಕ ಥಳಿಸಿದ್ದಾರೆ ಎನ್ನಲಾಗಿದೆ.</p>.<p>ಇದೇ ತಿಂಗಳ ಆರಂಭದಲ್ಲಿ ನಡೆದಪರೀಕ್ಷೆಯಲ್ಲಿ social ಪದವನ್ನು ತಪ್ಪಾಗಿ ಬರೆದಿದ್ದ ಕಾರಣಕ್ಕಾಗಿ ತಮ್ಮ ಮಗನಿಗೆ ಪ್ರೌಢ ಶಾಲೆ ಶಿಕ್ಷಕ ರಾಡ್ನಿಂದ ಥಳಿಸಿ, ಕಾಲಿನಿಂದ ಒದ್ದಿದ್ದರು.ಮೂರ್ಚೆ ತಪ್ಪಿ ನೆಲದ ಮೇಲೆ ಬೀಳುವವರೆಗೆ ಹೊಡೆದಿದ್ದರು ಎಂದು ಮೃತ ವಿದ್ಯಾರ್ಥಿಯ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ಸದ್ಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದ್ದು, ಪೊಲೀಸರುಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಗಂಭೀರವಾಗಿ ಗಾಯಗೊಂಡಿದ್ದ15 ವರ್ಷದ ನಿಖಿಲ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದ. ಇದರ ಬೆನ್ನಲ್ಲೇ ಆರೋಪಿ ಶಿಕ್ಷಕ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.</p>.<p>ನಿಖಲ್ ಸಾವಿನ ಸುದ್ದಿ ಹರಡುತ್ತಿದ್ದಂತೆ ಔರೈಯಾ ಜಿಲ್ಲೆಯಲ್ಲಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಬಾಲಕನ ಅಂತ್ಯಕ್ರಿಯೆಗೂ ಮುನ್ನ ಶಿಕ್ಷಕನನ್ನು ಬಂಧಿಸಬೇಕು ಎಂದು ಒತ್ತಾಯಿಸಿ, ಪೊಲೀಸ್ ವಾಹನವೊಂದಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವುದಾಗಿಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಪರೀಕ್ಷೆಯಲ್ಲಿ ಅಕ್ಷರಗಳನ್ನು ತಪ್ಪಾಗಿ ಬರೆದದಲಿತ ವಿದ್ಯಾರ್ಥಿಗೆ ಸಾಯುವಂತೆ ಥಳಿಸಿದ ಶಿಕ್ಷಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p>ಮೃತ ವಿದ್ಯಾರ್ಥಿನಿಖಿಲ್ ದೋಹ್ರೆ, ಔರೈಯ ಜಿಲ್ಲೆಯ ವೈಶೋಲಿ ಗ್ರಾಮದವನಾಗಿದ್ದು, ಅಚಲ್ಡಾ ಪೊಲೀಸ್ ಠಾಣೆ ವ್ಯಾಪ್ತಿಯ ಫಾನ್ಫುಡ್ ರಸ್ತೆಯಲ್ಲಿರುವ ಆದರ್ಶ ಇಂಟರ್ ಕಾಲೇಜು ಸಂಸ್ಥೆಯ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.</p>.<p>ವಿದ್ಯಾರ್ಥಿಯು ಪರೀಕ್ಷೆಯ ಒಎಂಆರ್ ಶೀಟ್ ಭರ್ತಿ ಮಾಡುವಾಗ ತಪ್ಪು ಮಾಡಿದ್ದ ಮತ್ತು ಉತ್ತರ ಪತ್ರಿಕೆಯಲ್ಲಿ 'ಸಮಾಜಿಕ್' (ಸಾಮಾಜಿಕ) ಪದವನ್ನು 'ಸಮಾಜಕ್' ಎಂದು ಬರೆದಿದ್ದ. ಇಷ್ಟಕ್ಕೇ ಕೋಪಗೊಂಡು ಶಿಕ್ಷಕ ಥಳಿಸಿದ್ದಾರೆ ಎನ್ನಲಾಗಿದೆ.</p>.<p>ಇದೇ ತಿಂಗಳ ಆರಂಭದಲ್ಲಿ ನಡೆದಪರೀಕ್ಷೆಯಲ್ಲಿ social ಪದವನ್ನು ತಪ್ಪಾಗಿ ಬರೆದಿದ್ದ ಕಾರಣಕ್ಕಾಗಿ ತಮ್ಮ ಮಗನಿಗೆ ಪ್ರೌಢ ಶಾಲೆ ಶಿಕ್ಷಕ ರಾಡ್ನಿಂದ ಥಳಿಸಿ, ಕಾಲಿನಿಂದ ಒದ್ದಿದ್ದರು.ಮೂರ್ಚೆ ತಪ್ಪಿ ನೆಲದ ಮೇಲೆ ಬೀಳುವವರೆಗೆ ಹೊಡೆದಿದ್ದರು ಎಂದು ಮೃತ ವಿದ್ಯಾರ್ಥಿಯ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ಸದ್ಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದ್ದು, ಪೊಲೀಸರುಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಗಂಭೀರವಾಗಿ ಗಾಯಗೊಂಡಿದ್ದ15 ವರ್ಷದ ನಿಖಿಲ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದ. ಇದರ ಬೆನ್ನಲ್ಲೇ ಆರೋಪಿ ಶಿಕ್ಷಕ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.</p>.<p>ನಿಖಲ್ ಸಾವಿನ ಸುದ್ದಿ ಹರಡುತ್ತಿದ್ದಂತೆ ಔರೈಯಾ ಜಿಲ್ಲೆಯಲ್ಲಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಬಾಲಕನ ಅಂತ್ಯಕ್ರಿಯೆಗೂ ಮುನ್ನ ಶಿಕ್ಷಕನನ್ನು ಬಂಧಿಸಬೇಕು ಎಂದು ಒತ್ತಾಯಿಸಿ, ಪೊಲೀಸ್ ವಾಹನವೊಂದಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವುದಾಗಿಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>