ಲಖನೌ: ‘ಪ್ರಸ್ತುತ ಉತ್ತರ ಪ್ರದೇಶದಲ್ಲಿರುವ ‘ಹಾನಿಕಾರಕ’ ಮತ್ತು ‘ನಕಾರಾತ್ಮಕ’ ರಾಜಕೀಯದ ವಿರುದ್ಧವಾಗಿ 2022ರಲ್ಲಿ ಪ್ರಜಾಪ್ರಭುತ್ವದ ಕ್ರಾಂತಿ ಆಗಲಿದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬುಧವಾರ ಹೇಳಿದರು.
‘ಈಗಿನ ಹಾನಿಕಾರಕ, ಸಾಂಪ್ರಾದಾಯಿಕ, ನಕಾರಾತ್ಮಕ ರಾಜಕೀಯದ ವಿರುದ್ಧ ಒಗ್ಗೂಡೋಣ. ಶೋಷಿತರು, ನಿರ್ಲಕ್ಷ್ಯಿತರು, ದಲಿತರು,ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಪರವಾದ ಹೊಸ ರಾಜಕೀಯ ಸೃಷ್ಟಿಯಾಗಲಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
2022ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ‘ಉತ್ತರ ಪ್ರದೇಶದಲ್ಲಿ 2022ರಲ್ಲಿ ಕೇವಲ ಚುನಾವಣೆ ನಡೆಯುವುದಿಲ್ಲ. ಬದಲಾಗಿ ನಾಟಕೀಯ ಕ್ರಾಂತಿಯಾಗಲಿದೆ. ವಿಧಾನಸಭಾ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ 350 ಸೀಟುಗಳನ್ನುಸಮಾಜವಾದಿ ಪಕ್ಷ ಗೆಲ್ಲಲಿದೆ. ಜನರು ಬಿಜೆಪಿಯ ವಿರುದ್ಧ ಇದ್ದಾರೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
आज की विघटनकारी-रूढ़िवादी नकारात्मक राजनीति सत्ता के विरुद्ध एकजुट शोषित, उपेक्षित, उत्पीड़ित, अपमानित दलित, दमित, वंचित, ग़रीब, किसान, मज़दूर, महिला व युवाओं की ‘नयी राजनीति’ जन्म ले रही है।