ಕನೌಜ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕುರಿತು ಆಕ್ಷೇಪಾರ್ಹ ಛಾಯಾಚಿತ್ರವನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
‘ರ್ಮೌಹಿಯಾ ಗ್ರಾಮದ ನಿವಾಸಿ ಆಶಿಷ್ ಯಾದವ್ (18) ಅವರನ್ನು ಬಂಧಿಸಲಾಗಿದೆ. ಪೋಸ್ಟ್ ಕುರಿತು ಕೆಲವರು ಡಿಜಿಪಿ ಅವರಿಗೆ ಟ್ವಿಟ್ಟರ್ನಲ್ಲಿ ದೂರು ನೀಡಿದ್ದರು’ ಎಂದು ತಾಲ್ಗ್ರಾಮ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಹರಿಶ್ಯಾಮ್ ಸಿಂಗ್ ತಿಳಿಸಿದ್ದಾರೆ.
ಜಿಲ್ಲಾ ನ್ಯಾಯಾಧೀಶ ರಾಕೇಶ್ ಕುಮಾರ್ ಮಿಶ್ರಾ ಮತ್ತು ಎಸ್ಪಿ ರಾಜೇಶ್ ಕುಮಾರ್ ಶ್ರೀವಾಸ್ತವ್ ಅವರು ತಾಲ್ಗ್ರಾಮ್ಠಾಣೆಗೆ ಭೇಟಿ ನೀಡಿ ವಿದ್ಯಾರ್ಥಿಯ ವಿಚಾರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.