ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿಗೆ ಅಧಿಕಾರ ನೀಡಿರುವ ಅನುಭವ ಇರುವ ಕಾರಣ ಈ ಬಾರಿ ಎಎಪಿಗೆ ಅವಕಾಶ ನೀಡಿ ಎಂದು ಎಎಪಿ ಕೇಳುತ್ತಿದೆ. ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು, 300 ಯೂನಿಟ್ ವಿದ್ಯುತ್ ಸೇರಿ ಹಲವಾರು ಉಚಿತ ಸೇವೆ ನೀಡುವ ವಾಗ್ದಾನವನ್ನು ನೀಡಿದ್ದಾರೆ. ಹೀಗಾಗಿ, ಬಿಜೆಪಿ ಮತ್ತೆ ಅಧಿಕಾರ ಹಿಡಿಯುವುದು ಅಷ್ಟು ಸುಲಭವಿಲ್ಲ ಎನ್ನಲಾಗಿದೆ.