<p><strong>ಡೆಹ್ರಾಡೂನ್:</strong> ಉತ್ತರಾಖಂಡ್ ರಾಜ್ಯದಲ್ಲಿ ಪರ್ವತಾರೋಹಣಕ್ಕೆ ತೆರಳಿದ್ದ 21ಜನರು ಹಿಮಪಾತಕ್ಕೆಸಿಲುಕಿದ್ದಾರೆಎಂದು ವರದಿಯಾಗಿದೆ.</p>.<p>ಇಲ್ಲಿನ ಘರ್ವಾಲ್ ಪ್ರದೇಶದಲ್ಲಿರುವ ದ್ರೌಪದಿ ಪರ್ವತದ ದಂಡ–2 ಶಿಖರಪ್ರದೇಶದಲ್ಲಿ ಹಿಮಪಾತವಾಗಿದೆಎಂದು ಪೊಲೀಸರು ಹೇಳಿದ್ದಾರೆ.</p>.<p>29ಜನರು ಪರ್ವತಾರೋಹಣಕ್ಕೆ ತೆರಳಿದ್ದರು. ಇವರ ಪೈಕಿ 21ಜನರು ಹಿಮಪಾತಕ್ಕೆ ಸಿಲುಕಿದ್ದಾರೆ. 9ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಕ್ಷಣೆ ಕಾರ್ಯಾಚರಣೆ ಮಾಡುತ್ತಿರುವ ಅಧಿಕಾರಿಗಳು ಹೇಳಿದ್ದಾರೆ.</p>.<p>ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಹಿಮಪಾತವಾಯಿತು ಎಂದು ಪರ್ವತರೋಹಿಯೊಬ್ಬರು ಮಾಹಿತಿ ನೀಡಿದ್ದಾರೆ.ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣ ತಂಡಗಳು, ಐಟಿಬಿಪಿ ಯೋಧರು, ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿಗಳುಘಟನಾ ಸ್ಥಳಕ್ಕೆ ಹೋಗಿದ್ದು ರಕ್ಷಣೆ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ರಕ್ಷಣೆ ಕಾರ್ಯಕ್ಕೆ ನೆರವು ನೀಡುವಂತೆ ಮುಖ್ಯಮಂತ್ರಿ ದಾಮಿ ಅವರು ಕೇಂದ್ರ ರಕ್ಷಣಾಸಚಿವ ರಾಜನಾಥ್ ಸಿಂಗ್ ಅವರಿಗೆಮನವಿ ಮಾಡಿದ್ದರು. ಈ ಬಗ್ಗೆ ಅವರು ಟ್ವಿಟ್ ಮಾಡಿದ್ದಾರೆ.</p>.<p>ಪರ್ವತಾರೋಹಣಕ್ಕೆ ತೆರಳಿದವರುಉತ್ತರ ಕಾಶಿಯ ನೆಹರು ಪರ್ವತಾರೋಹಣ ಸಂಸ್ಥೆಯವರು ಎಂದು ತಿಳಿದು ಬಂದಿದೆ. ಇವರನ್ನುರಕ್ಷಿಸಲು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಉತ್ತರಾಖಂಡಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ತಿಳಿಸಿದ್ದಾರೆ.</p>.<p><strong>ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಉತ್ತರಾಖಂಡ್ ರಾಜ್ಯದಲ್ಲಿ ಪರ್ವತಾರೋಹಣಕ್ಕೆ ತೆರಳಿದ್ದ 21ಜನರು ಹಿಮಪಾತಕ್ಕೆಸಿಲುಕಿದ್ದಾರೆಎಂದು ವರದಿಯಾಗಿದೆ.</p>.<p>ಇಲ್ಲಿನ ಘರ್ವಾಲ್ ಪ್ರದೇಶದಲ್ಲಿರುವ ದ್ರೌಪದಿ ಪರ್ವತದ ದಂಡ–2 ಶಿಖರಪ್ರದೇಶದಲ್ಲಿ ಹಿಮಪಾತವಾಗಿದೆಎಂದು ಪೊಲೀಸರು ಹೇಳಿದ್ದಾರೆ.</p>.<p>29ಜನರು ಪರ್ವತಾರೋಹಣಕ್ಕೆ ತೆರಳಿದ್ದರು. ಇವರ ಪೈಕಿ 21ಜನರು ಹಿಮಪಾತಕ್ಕೆ ಸಿಲುಕಿದ್ದಾರೆ. 9ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಕ್ಷಣೆ ಕಾರ್ಯಾಚರಣೆ ಮಾಡುತ್ತಿರುವ ಅಧಿಕಾರಿಗಳು ಹೇಳಿದ್ದಾರೆ.</p>.<p>ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಹಿಮಪಾತವಾಯಿತು ಎಂದು ಪರ್ವತರೋಹಿಯೊಬ್ಬರು ಮಾಹಿತಿ ನೀಡಿದ್ದಾರೆ.ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣ ತಂಡಗಳು, ಐಟಿಬಿಪಿ ಯೋಧರು, ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿಗಳುಘಟನಾ ಸ್ಥಳಕ್ಕೆ ಹೋಗಿದ್ದು ರಕ್ಷಣೆ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ರಕ್ಷಣೆ ಕಾರ್ಯಕ್ಕೆ ನೆರವು ನೀಡುವಂತೆ ಮುಖ್ಯಮಂತ್ರಿ ದಾಮಿ ಅವರು ಕೇಂದ್ರ ರಕ್ಷಣಾಸಚಿವ ರಾಜನಾಥ್ ಸಿಂಗ್ ಅವರಿಗೆಮನವಿ ಮಾಡಿದ್ದರು. ಈ ಬಗ್ಗೆ ಅವರು ಟ್ವಿಟ್ ಮಾಡಿದ್ದಾರೆ.</p>.<p>ಪರ್ವತಾರೋಹಣಕ್ಕೆ ತೆರಳಿದವರುಉತ್ತರ ಕಾಶಿಯ ನೆಹರು ಪರ್ವತಾರೋಹಣ ಸಂಸ್ಥೆಯವರು ಎಂದು ತಿಳಿದು ಬಂದಿದೆ. ಇವರನ್ನುರಕ್ಷಿಸಲು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಉತ್ತರಾಖಂಡಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ತಿಳಿಸಿದ್ದಾರೆ.</p>.<p><strong>ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>