ಹರಬಂಸ್ ಕಪೂರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. 'ಉತ್ತರಾಖಂಡದ ತಮ್ಮ ಪಕ್ಷದ ಸಹೋದ್ಯೋಗಿ ಹರಬಂಸ್ ಕಪೂರ್ಅವರ ನಿಧನದಿಂದ ದುಃಖವಾಗಿದೆ. ಹಿರಿಯ ಶಾಸಕ ಹಾಗೂ ಆಡಳಿತಗಾರ ಕಪೂರ್ ಅವರನ್ನು ಸಾರ್ವಜನಿಕ ಸೇವೆ ಮತ್ತು ಸಮಾಜ ಕಲ್ಯಾಣಕ್ಕಾಗಿ ನೀಡಿದ ಕೊಡುಗೆಗಳಿಗಾಗಿ ಸ್ಮರಿಸಲಾಗುವುದು. ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ' ಎಂದು ಟ್ವೀಟ್ ಮಾಡಿದ್ದಾರೆ.