ಇದೇ ವೇಳೆ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿರುವ ಕೇಜ್ರಿವಾಲ್, 'ಪ್ರತಿಪಕ್ಷಕ್ಕೆ ನಾಯಕನೇ ಇಲ್ಲ. ನಾಯಕನನ್ನು ಆಯ್ಕೆ ಮಾಡಲು ಅವರು ಕಳೆದ ಒಂದು ತಿಂಗಳಿನಿಂದ ದೆಹಲಿಗೆ ಬರುತ್ತಿದ್ದಾರೆ. ಉತ್ತರಾಖಂಡ ನಿವಾಸಿಗಳ ಅಭಿವೃದ್ಧಿಯ ಬಗ್ಗೆ ಯಾರು ಯೋಚಿಸುತ್ತಾರೆ? ಇಂತಹ ಪಕ್ಷಗಳು ಉತ್ತರಾಖಂಡ ಜನರ ಬಗ್ಗೆ ಕಾಳಜಿ ವಹಿಸುತ್ತವೆಯೇ? ಅವರು(ಕಾಂಗ್ರೆಸ್ ಮತ್ತು ಬಿಜೆಪಿ) ಜನರನ್ನು ಲೆಕ್ಕಿಸುವುದಿಲ್ಲ. ಅವರು ಅಧಿಕಾರಕ್ಕಾಗಿ ಮಾತ್ರ ಹೋರಾಡುತ್ತಿದ್ದಾರೆ' ಎಂದು ತಿಳಿಸಿದ್ದಾರೆ.