ಹಿಮನದಿ ಸ್ಫೋಟಕ್ಕೆ ಕಾರಣ ತಿಳಿದಿಲ್ಲ, ರಕ್ಷಣೆಗೆ ಆದ್ಯತೆ: ಉತ್ತರಾಖಂಡ ಸಿಎಂ ರಾವತ್

ಡೆಹ್ರಾಡೂನ್: ಹಿಮನದಿ ಸ್ಫೋಟಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ರಕ್ಷಣಾ ಕಾರ್ಯಾಚರಣೆ, ಜನರ ಜೀವ ಉಳಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.
ಕಣ್ಮರೆಯಾಗಿರುವವರ ಶೋಧ ನಡೆಸುವುದಕ್ಕಾಗಿ ಶ್ವಾನ ದಳವನ್ನೂ ನಿಯೋಜಿಸಲಾಗಿದೆ. ಚಮೋಲಿಯ ತಪೋವನ ಅಣೆಕಟ್ಟೆ ಬಳಿ ಶ್ವಾನ ದಳದ ಸಹಾಯದೊಂದಿಗೆ ಶೋಧ ಕಾರ್ಯ ನಡೆಯುತ್ತಿದೆ. ನೂರಾರು ಇಂಡೊ–ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿಯೂ ಶೋಧಕಾರ್ಯದಲ್ಲಿ ನಿರತರಾಗಿದ್ದಾರೆ.
ಓದಿ: ಉತ್ತರಾಖಂಡದಲ್ಲಿ ಹಿಮನದಿ ಸ್ಫೋಟ: 125 ಮಂದಿ ಕಣ್ಮರೆ
Uttarakhand: Canine squad also deployed to carry out the search operation near Tapovan dam in Chamoli. A flash flood hit the area yesterday.
(Pic Source: NDRF Director-General SN Pradhan) pic.twitter.com/gwIS8w8dVN
— ANI (@ANI) February 8, 2021
ರಿಷಿಕೇಶ ಮತ್ತು ಹರಿದ್ವಾರಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹಿಮನದಿ ಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಸಿಲುಕಿ 7 ಮಂದಿ ಮೃತಪಟ್ಟಿದ್ದು, 125 ಮಂದಿ ಕಣ್ಮರೆಯಾಗಿದ್ದಾರೆ. ಕಣ್ಮರೆಯಾದವರ ಪತ್ತೆಗೆ ಶೋಧಕಾರ್ಯ ನಡೆಯುತ್ತಿದೆ.
ಓದಿ: ಉತ್ತರಾಖಂಡದಲ್ಲಿ ಹಿಮನದಿ ಸ್ಪೋಟ: ಉ.ಪ್ರದೇಶದ ಗಂಗಾತಟದ ಜಿಲ್ಲೆಗಳಲ್ಲಿ ಹೈ ಅಲರ್ಟ್
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.