ಡೆಹ್ರಾಡೂನ್ : ‘ಉತ್ತರಾ ಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿದು ಸಂಭವಿಸಿದ ನದಿ ಪ್ರವಾಹದ ನಂತರ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಸೋಮವಾರ ರಾತ್ರಿ ವೇಳೆಗೆ 26 ಶವಗಳನ್ನು ಪತ್ತೆ ಮಾಡಲಾಗಿದೆ. ಇನ್ನೂ 171 ಮಂದಿ ಕಣ್ಮರೆಯಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯುತ್ ಯೋಜನಾ ಸ್ಥಳದ ಸುರಂಗದಲ್ಲಿ ಸಿಲುಕಿರುವ ಕನಿಷ್ಠ 30 ಕಾರ್ಮಿಕರನ್ನು ರಕ್ಷಿಸಲಾಗಿದೆ.