ಡೆಹ್ರಾಡೂನ್: ಕೋವಿಡ್–19 ಪಿಡುಗಿನ ಸಂಭಾವ್ಯ 3ನೇ ಅಲೆಯ ಕಾರಣದಿಂದಾಗಿ ಈ ವರ್ಷದ ಕನ್ವರ್ ಯಾತ್ರೆಯನ್ನು ರದ್ದುಗೊಳಿಸಿ ಉತ್ತರಾಖಂಡ ಸರ್ಕಾರ ಮಂಗಳವಾರ ಆದೇಶಿಸಿದೆ ಎಂದು ಮೂಲಗಳು ಹೇಳಿವೆ.
‘ಕನ್ವರ್ ಯಾತ್ರೆ ನಮ್ಮ ಸನಾತನ ಸಂಸ್ಕೃತಿಯ ಭಾಗವಾಗಿದ್ದರೂ, ಕೋವಿಡ್ ಪಿಡುಗಿನ ಈ ಸಮಯದಲ್ಲಿ ಜನರ ಪ್ರಾಣ ರಕ್ಷಣೆಯೇ ಮುಖ್ಯ’ ಎಂದು ಮುಖ್ಯಮಂತ್ರಿ ಪುಷ್ಕರ್ಸಿಂಗ್ ಧಾಮಿ ಹೇಳಿದ್ದಾರೆ.
ರಾಜ್ಯ ಹಾಗೂ ದೇಶದ ಜನರ ಹಿತದೃಷ್ಟಿಯಿಂದ ಈ ಯಾತ್ರೆಗೆ ಅನುಮತಿ ನೀಡಬಾರದು ಎಂದು ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಇತ್ತೀಚೆಗೆ ಮುಖ್ಯಮಂತ್ರಿ ಪುಷ್ಕರ್ಸಿಂಗ್ ಧಾಮಿ ಅವರಿಗೆ ಪತ್ರ ಬರೆದಿತ್ತು.
ಕೋವಿಡ್ ಕಾರಣದಿಂದ ಕಳೆದ ವರ್ಷವೂ ಈ ಯಾತ್ರೆಯನ್ನು ರದ್ದುಪಡಿಸಲಾಗಿತ್ತು.