<p><strong>ಡೆಹ್ರಾಡೂನ್:</strong> 2013 ಜೂನ್ ತಿಂಗಳಲ್ಲಿ ಕೇದಾರನಾಥದಲ್ಲಿ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ಮತ್ತೆ ಆರಂಭವಾಗಿದೆ. ಇದಕ್ಕಾಗಿಉತ್ತರಾಖಂಡ ಪೊಲೀಸರು ಬುಧವಾರ 10 ತಂಡಗಳನ್ನು ನಿಯೋಜನೆ ಮಾಡಿದ್ದಾರೆ.</p>.<p>ಕೇದಾರನಾಥ ದೇಗುಲದ ಸುತ್ತಲಿನ ಪ್ರದೇಶಗಳಲ್ಲಿ 10 ದಿನಗಳ ಕಾಲ ಈ ತಂಡ ಶೋಧ ಕಾರ್ಯಾಚರಣೆ ನಡೆಸಲಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.</p>.<p>ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇತೃತ್ವದ ಪ್ರತಿ ತಂಡದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ, ಇಬ್ಬರು ಎಸ್ಡಿಆರ್ಎಫ್ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿ ಇರಲಿದ್ದಾರೆ. ರುದ್ರಪ್ರಯಾಗ್ ಎಸ್ಪಿ ನವನೀತ್ ಸಿಂಗ್ ಅವರ ಸೂಚನೆಯಂತೆ ಗೌರಿಕುಂಡ್ನಿಂದ ವಿವಿಧ ಭಾಗಗಳಲ್ಲಿ ಮತ್ತು ಸೋನ್ಪ್ರಯಾಗ್ ಪ್ರದೇಶದಲ್ಲಿ ಹುಡುಕಾಟ ನಡೆಯಲಿದೆ.</p>.<p>ಹುಡುಕಾಟ ನಡೆಸುವ ವೇಳೆ ನಾಪತ್ತೆಯಾದವರ ಯಾವುದೇ ಕುರುಹು ಸಿಕ್ಕಿದರೆ ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲಿಯೇ ಡಿಎನ್ಎ ಮಾದರಿ ಸಂಗ್ರಹಿಸಲಿದ್ದಾರೆ ಎಂದು ಡಿಜಿಪಿ ಹೇಳಿದ್ದಾರೆ.<br /><br />ಉತ್ತರಾಖಂಡ ಹೈಕೋರ್ಟ್ ಆದೇಶದ ಪ್ರಕಾರ ಈ ಶೋಧ ಕಾರ್ಯಾಚರಣೆ ನಡೆಯುತ್ತಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> 2013 ಜೂನ್ ತಿಂಗಳಲ್ಲಿ ಕೇದಾರನಾಥದಲ್ಲಿ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ಮತ್ತೆ ಆರಂಭವಾಗಿದೆ. ಇದಕ್ಕಾಗಿಉತ್ತರಾಖಂಡ ಪೊಲೀಸರು ಬುಧವಾರ 10 ತಂಡಗಳನ್ನು ನಿಯೋಜನೆ ಮಾಡಿದ್ದಾರೆ.</p>.<p>ಕೇದಾರನಾಥ ದೇಗುಲದ ಸುತ್ತಲಿನ ಪ್ರದೇಶಗಳಲ್ಲಿ 10 ದಿನಗಳ ಕಾಲ ಈ ತಂಡ ಶೋಧ ಕಾರ್ಯಾಚರಣೆ ನಡೆಸಲಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.</p>.<p>ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇತೃತ್ವದ ಪ್ರತಿ ತಂಡದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ, ಇಬ್ಬರು ಎಸ್ಡಿಆರ್ಎಫ್ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿ ಇರಲಿದ್ದಾರೆ. ರುದ್ರಪ್ರಯಾಗ್ ಎಸ್ಪಿ ನವನೀತ್ ಸಿಂಗ್ ಅವರ ಸೂಚನೆಯಂತೆ ಗೌರಿಕುಂಡ್ನಿಂದ ವಿವಿಧ ಭಾಗಗಳಲ್ಲಿ ಮತ್ತು ಸೋನ್ಪ್ರಯಾಗ್ ಪ್ರದೇಶದಲ್ಲಿ ಹುಡುಕಾಟ ನಡೆಯಲಿದೆ.</p>.<p>ಹುಡುಕಾಟ ನಡೆಸುವ ವೇಳೆ ನಾಪತ್ತೆಯಾದವರ ಯಾವುದೇ ಕುರುಹು ಸಿಕ್ಕಿದರೆ ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲಿಯೇ ಡಿಎನ್ಎ ಮಾದರಿ ಸಂಗ್ರಹಿಸಲಿದ್ದಾರೆ ಎಂದು ಡಿಜಿಪಿ ಹೇಳಿದ್ದಾರೆ.<br /><br />ಉತ್ತರಾಖಂಡ ಹೈಕೋರ್ಟ್ ಆದೇಶದ ಪ್ರಕಾರ ಈ ಶೋಧ ಕಾರ್ಯಾಚರಣೆ ನಡೆಯುತ್ತಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>