ಮಾಜಿ ಮುಖ್ಯಮಂತ್ರಿ ಭುವನ್ ಚಂದ್ರ ಖಂಡೂರಿ ಅವರ ಮಗಳಾಗಿರುವ ರೀತು ಅವರಿಗೆ ಟಿಕೆಟ್ ನಿರಾಕರಿಸಿದ್ದು ಪಕ್ಷದಲ್ಲಿ ಹಲವರ ಆಶ್ಚರ್ಯಕ್ಕೆ ಕಾರಣವಾಗಿದೆ. ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅನು ಕಕ್ಕರ್ ಅವರ ನೇತೃತ್ವದ ನಿಯೋಗವು ಪಕ್ಷದ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಜಯ್ ಕುಮಾರ್ ಅವರನ್ನು ಭೇಟಿಯಾಗಿ, ನಿರ್ಧಾರ ಮರುಪರಿಶೀಲನೆಗೆ ಕೋರಿದೆ.