ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾನುವಾರ ಸಂಭವಿಸಿದ ಭೀಕರ ಹಿಮನದಿ ಸ್ಫೋಟದ ಬಳಿಕ ಕಣ್ಮರೆಯಾದವರ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಈವರೆಗೆ 15 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 14 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಚಮೋಲಿ ಪೊಲೀಸರು ತಿಳಿಸಿದ್ದಾರೆ.
ಕರ್ಣಪ್ರಯಾಗ್ ಮಾರ್ಗದಿಂದ 7 ಹಾಗೂ ತಪೋವನ ಪ್ರದೇಶದಿಂದ 3 ಮೃತದೇಹಗಳನ್ನು ಪತ್ತೆಹಚ್ಚಚಲಾಗಿದೆ. ತಪೋವನದ ಸುರಂಗವೊಂದರಿಂದ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
‘ಭೀತರಾಗುವ ಅಗತ್ಯವಿಲ್ಲ. ಹಿಮನದಿ ಸ್ಫೋಟ ನಿನ್ನೆ (ಭಾನುವಾರ) ಸಂಭವಿಸಿದೆ. ರೈನಿ ವಿದ್ಯುತ್ ಯೋಜನೆ ಪ್ರದೇಶದಲ್ಲಿನ ಪ್ರವಾಹ, ಬಂಡೆಗಳು ಮತ್ತು ಭಗ್ನಾವಶೇಷಗಳು ತಪೋವನ ಪ್ರದೇಶದಲ್ಲಿ ಹಾನಿಗೆ ಕಾರಣವಾಗಿವೆ. ಎಲ್ಲವೂ ನಿನ್ನೆ ನಡೆದಿದೆ’ ಎಂದೂ ಅವರು ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ತಂಡಗಳನ್ನು ಒಳಗೊಂಡ ಎಂಐ–17 ಹಾಗೂ ಎಎಲ್ಎಚ್ ಹೆಲಿಕಾಪ್ಟರ್ಗಳನ್ನು ಡೆಹ್ರಾಡೂನ್ನಿಂದ ಜೋಶಿಮಠದತ್ತ ಕಳುಹಿಸಿಕೊಡಲಾಗಿದೆ. ವೈಮಾನಿಕ ರಕ್ಷಣಾ, ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ.
Aerial rescue & relief missions have resumed with Mi-17 & ALH helicopters flying from Dehradun to Joshimath with disaster relief teams on board: Indian Air Force#Uttarakhandpic.twitter.com/RplNQxbayO