<p><strong>ನವದೆಹಲಿ:</strong>ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್ ಅವರು ಸಿರಿಯಾದ ವಿದೇಶಾಂಗ ಸಚಿವರೊಂದಿಗೆ ಗುರುವಾರ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಸಿರಿಯಾದ ರಾಷ್ಟ್ರೀಯ ಪುನರ್ನಿರ್ಮಾಣ ಪ್ರಯತ್ನಗಳನ್ನು ಭಾರತ ಬೆಂಬಲಿಸಲಿದೆ ಎಂದು ಭರವಸೆ ನೀಡಿದ್ದಾರೆ.</p>.<p>‘ಭಾರತ-ಸಿರಿಯಾ ಸಚಿವರ ಸಮಾಲೋಚನೆ ವೇಳೆಸಿರಿಯಾದ ಉಪ ವಿದೇಶಾಂಗ ಸಚಿವ ಎಚ್ಇ ಫೇಸಲ್ ಮೆಕ್ಡಾಡ್ ಅವರೊಂದಿಗೆ ಇಂದು ಸಂಜೆ ಅತ್ಯುತ್ತಮವಾದ ಚರ್ಚೆ ನಡೆಯಿತು. ಭಾರತ ಮತ್ತು ಭಾರತದ ಜನರ ಬಗ್ಗೆ ಆತ್ಮೀಯ ಭಾವನೆಗಳನ್ನು ಹೊಂದಿರುವ ಅವರಿಗೆ ಧನ್ಯವಾದಗಳು’ ಎಂದು ಮುರಳೀಧರನ್ ಟ್ವೀಟ್ ಮಾಡಿದ್ದಾರೆ.</p>.<p>‘ಸಿರಿಯಾದ ಪೀಪಲ್ಸ್ ಅಸೆಂಬ್ಲಿ ಚುನಾವಣೆಯ ಯಶಸ್ಸಿಗೆ ಅಭಿನಂದನೆಗಳು ಮತ್ತು ಅಲ್ಲಿನ ರಾಷ್ಟ್ರೀಯ ಪುನರ್ನಿರ್ಮಾಣ ಪ್ರಯತ್ನಗಳಿಗೆ ಭಾರತದ ಬೆಂಬಲವಿರಲಿದೆ ಎಂದು ತಿಳಿಸಲಾಗಿದೆ’ ಎಂದು ಹೇಳಿದ್ದಾರೆ.</p>.<p>ಸಭೆ ವೇಳೆ ದ್ವಿಪಕ್ಷೀಯ ಅಭಿವೃದ್ಧಿ ಯೋಜನೆಗಳನ್ನು ಚುರುಕುಗೊಳಿಸುವ, ಸಹಕಾರ ವೃದ್ಧಿಗಾಗಿಉಭಯ ದೇಶಗಳ ಸಾಮರ್ಥ್ಯ ಹೆಚ್ಚಿಸುವ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಜೊತೆಗೆ ಕೋವಿಡ್–19 ವಿರುದ್ಧದ ಹೋರಾಟವೂ ಸೇರಿದಂತೆ ಸಿರಿಯಾಕ್ಕೆ ಭಾರತವು ಮಾನವೀಯ ನೆರವು ವಿಸ್ತರಿಸಲಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್ ಅವರು ಸಿರಿಯಾದ ವಿದೇಶಾಂಗ ಸಚಿವರೊಂದಿಗೆ ಗುರುವಾರ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಸಿರಿಯಾದ ರಾಷ್ಟ್ರೀಯ ಪುನರ್ನಿರ್ಮಾಣ ಪ್ರಯತ್ನಗಳನ್ನು ಭಾರತ ಬೆಂಬಲಿಸಲಿದೆ ಎಂದು ಭರವಸೆ ನೀಡಿದ್ದಾರೆ.</p>.<p>‘ಭಾರತ-ಸಿರಿಯಾ ಸಚಿವರ ಸಮಾಲೋಚನೆ ವೇಳೆಸಿರಿಯಾದ ಉಪ ವಿದೇಶಾಂಗ ಸಚಿವ ಎಚ್ಇ ಫೇಸಲ್ ಮೆಕ್ಡಾಡ್ ಅವರೊಂದಿಗೆ ಇಂದು ಸಂಜೆ ಅತ್ಯುತ್ತಮವಾದ ಚರ್ಚೆ ನಡೆಯಿತು. ಭಾರತ ಮತ್ತು ಭಾರತದ ಜನರ ಬಗ್ಗೆ ಆತ್ಮೀಯ ಭಾವನೆಗಳನ್ನು ಹೊಂದಿರುವ ಅವರಿಗೆ ಧನ್ಯವಾದಗಳು’ ಎಂದು ಮುರಳೀಧರನ್ ಟ್ವೀಟ್ ಮಾಡಿದ್ದಾರೆ.</p>.<p>‘ಸಿರಿಯಾದ ಪೀಪಲ್ಸ್ ಅಸೆಂಬ್ಲಿ ಚುನಾವಣೆಯ ಯಶಸ್ಸಿಗೆ ಅಭಿನಂದನೆಗಳು ಮತ್ತು ಅಲ್ಲಿನ ರಾಷ್ಟ್ರೀಯ ಪುನರ್ನಿರ್ಮಾಣ ಪ್ರಯತ್ನಗಳಿಗೆ ಭಾರತದ ಬೆಂಬಲವಿರಲಿದೆ ಎಂದು ತಿಳಿಸಲಾಗಿದೆ’ ಎಂದು ಹೇಳಿದ್ದಾರೆ.</p>.<p>ಸಭೆ ವೇಳೆ ದ್ವಿಪಕ್ಷೀಯ ಅಭಿವೃದ್ಧಿ ಯೋಜನೆಗಳನ್ನು ಚುರುಕುಗೊಳಿಸುವ, ಸಹಕಾರ ವೃದ್ಧಿಗಾಗಿಉಭಯ ದೇಶಗಳ ಸಾಮರ್ಥ್ಯ ಹೆಚ್ಚಿಸುವ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಜೊತೆಗೆ ಕೋವಿಡ್–19 ವಿರುದ್ಧದ ಹೋರಾಟವೂ ಸೇರಿದಂತೆ ಸಿರಿಯಾಕ್ಕೆ ಭಾರತವು ಮಾನವೀಯ ನೆರವು ವಿಸ್ತರಿಸಲಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>