ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನನಷ್ಟ ಮೊಕದ್ದಮೆ: ಅಚ್ಯುತಾನಂದನ್‌ಗೆ ₹10 ಲಕ್ಷ ದಂಡ

Last Updated 25 ಜನವರಿ 2022, 2:54 IST
ಅಕ್ಷರ ಗಾತ್ರ

ತಿರುವನಂತಪುರಂ:ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆಕಾಂಗ್ರೆಸ್‌ ನಾಯಕ ಉಮ್ಮನ್‌ ಚಾಂಡಿ ಅವರಿಗೆ ₹ 10.10 ಲಕ್ಷ ಪರಿಹಾರನೀಡಬೇಕು ಎಂದು ಸಿಪಿಎಂ ಪಕ್ಷದ ಹಿರಿಯ ಮುಖಂಡ, ಕೇರಳದ ಮಾಜಿಮುಖ್ಯಮಂತ್ರಿ ವಿ.ಎಸ್‌.ಅಚ್ಯುತಾನಂದನ್‌ ಅವರಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯವು ಸೋಮವಾರ ಆದೇಶಿಸಿತು.

2013ರಲ್ಲಿ ಅಚ್ಯುತಾನಂದನ್‌ ಅವರು ಪ್ರತಿಪಕ್ಷದ ನಾಯಕರಾಗಿದ್ದರು.ಮುಖ್ಯಮಂತ್ರಿಯಾಗಿದ್ದ ಚಾಂಡಿ ಅವರ ವಿರುದ್ಧ ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಚಾನಲ್‌ಗೆ ನೀಡಿದ್ದ ಸಂದರ್ಶನದಲ್ಲಿ ಹಗರಣಕ್ಕೆ ಸಂಬಂಧಿಸಿ ಕಂಪನಿಯನ್ನು ಚಾಂಡಿ ಅವರೇ ಸ್ಥಾಪಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಚಾಂಡಿ ಮೊಕದ್ದಮೆ ಹೂಡಿದ್ದರು.

ಚಾಂಡಿ ಅವರು ₹ 10.10 ಲಕ್ಷ ಪರಿಹಾರ ಕೋರಿ ಮೊಕದ್ದಮೆ ದಾಖಲಿಸಿದ್ದರು. ಶೇ 6ರ ಬಡ್ಡಿಯೊಂದಿಗೆ ಪರಿಹಾರ ಮೊತ್ತವನ್ನು ಪಾವತಿಸಬೇಕು ಎಂದು ಕೋರ್ಟ್‌ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT