ತಿರುವನಂತಪುರಂ:ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರಿಗೆ ₹ 10.10 ಲಕ್ಷ ಪರಿಹಾರನೀಡಬೇಕು ಎಂದು ಸಿಪಿಎಂ ಪಕ್ಷದ ಹಿರಿಯ ಮುಖಂಡ, ಕೇರಳದ ಮಾಜಿಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಅವರಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯವು ಸೋಮವಾರ ಆದೇಶಿಸಿತು.
2013ರಲ್ಲಿ ಅಚ್ಯುತಾನಂದನ್ ಅವರು ಪ್ರತಿಪಕ್ಷದ ನಾಯಕರಾಗಿದ್ದರು.ಮುಖ್ಯಮಂತ್ರಿಯಾಗಿದ್ದ ಚಾಂಡಿ ಅವರ ವಿರುದ್ಧ ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಚಾನಲ್ಗೆ ನೀಡಿದ್ದ ಸಂದರ್ಶನದಲ್ಲಿ ಹಗರಣಕ್ಕೆ ಸಂಬಂಧಿಸಿ ಕಂಪನಿಯನ್ನು ಚಾಂಡಿ ಅವರೇ ಸ್ಥಾಪಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಚಾಂಡಿ ಮೊಕದ್ದಮೆ ಹೂಡಿದ್ದರು.
ಚಾಂಡಿ ಅವರು ₹ 10.10 ಲಕ್ಷ ಪರಿಹಾರ ಕೋರಿ ಮೊಕದ್ದಮೆ ದಾಖಲಿಸಿದ್ದರು. ಶೇ 6ರ ಬಡ್ಡಿಯೊಂದಿಗೆ ಪರಿಹಾರ ಮೊತ್ತವನ್ನು ಪಾವತಿಸಬೇಕು ಎಂದು ಕೋರ್ಟ್ ಆದೇಶಿಸಿದೆ.