ಪುಣೆಯಲ್ಲಿ ‘ಲೋಕಮಾನ್ಯ ತಿಲಕ್ ಪ್ರಶಸ್ತಿ’ ಸ್ವೀಕರಿಸಿದ ಸೈರಸ್ ಪೂನಾವಾಲ, ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ‘ಲಸಿಕೆ ರಫ್ತು ನಿಷೇಧ ಮೋದಿ ಸರ್ಕಾರದ ಅತ್ಯಂತ ಕೆಟ್ಟ ನಡೆ. ಈ ಬಗ್ಗೆ ನಾನು ಬಾಯಿ ತೆರೆಯಬಾರದೆಂದು ಎಂದು ನನ್ನ ಮಗ ಕೇಳಿಕೊಂಡಿದ್ದಾನೆ. ಆದರೆ ರಫ್ತಿಗೆ ಅವಕಾಶ ನೀಡಬೇಕು ಎಂಬುದು ನನ್ನ ಅಭಿಪ್ರಾಯ,’ ಎಂದು ಸೈರಸ್ ಪೂನಾವಾಲ ಹೇಳಿದ್ದಾರೆ.