<p><strong>ಸಿದ್ಧಾರ್ಥನಗರ(ಉತ್ತರಪ್ರದೇಶ): </strong>ಮೊದಲ ಡೋಸ್ ಕೋವಿಶೀಲ್ಡ್ ಪಡೆದಿದ್ದ 20 ಗ್ರಾಮಸ್ಥರಿಗೆ ಕೋವ್ಯಾಕ್ಸಿನ್ ನೀಡಿ ಆರೋಗ್ಯ ಕಾರ್ಯಕರ್ತರು .ಅಚಾತುರ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ನಡೆದಿದೆ.</p>.<p>ಬರ್ಹ್ನಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಅಚಾತುರ್ಯ ನಡೆದಿದೆ. ಮೇ 14 ರಂದು ಆಡಾಹಿ ಕಲಾ ಮತ್ತು ಇನ್ನೊಂದು ಹಳ್ಳಿಯ ಗ್ರಾಮಸ್ಥರು ಇಲ್ಲಿ ಕೋವಾಕ್ಸಿನ್ ಲಸಿಕೆಗಳನ್ನು ಪಡೆದಿದ್ದಾರೆ.</p>.<p>ಘಟನೆ ಕುರಿತಂತೆ ತನಿಖೆಗೆ ಆದೇಶಿಸಿದ್ದು ಈ ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯ ವೈದ್ಯಕೀಯ ಅಧಿಕಾರಿ ಸಂದೀಪ್ ಚೌಧರಿ ಭರವಸೆ ನೀಡಿದ್ದಾರೆ.</p>.<p>ಲಸಿಕೆ ವ್ಯತ್ಯಾಸದಿಂದ ಹಳ್ಳಿಗರ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡುಬಂದಿಲ್ಲ. ಆರೋಗ್ಯ ಇಲಾಖೆಯ ತಂಡ ಈಗಾಗಲೇ ಅವರನ್ನು ಭೇಟಿ ಮಾಡಿದೆ ಎಂದು ಅವರು ಹೇಳಿದ್ದಾರೆ.</p>.<p>ಮೊದಲ ಮತ್ತು ಎರಡನೆಯ ಡೋಸ್ ವಿಭಿನ್ನ ಲಸಿಕೆಗಳನ್ನು ಪಡೆದಿದ್ದಾರೆ ಎಂದು ಗ್ರಾಮಸ್ಥ ರಾಮ್ ಸೂರತ್ ಅವರು, ಆರೋಗ್ಯ ಕಾರ್ಯಕರ್ತರ ಗಮನಕ್ಕೆ ತಂದಾಗ ಈ ಘಟನೆ ಬೆಳಕಿಗೆ ಬಂದಿದೆ.</p>.<p>ಆರೋಗ್ಯ ಕಾರ್ಯಕರ್ತರ ಕಡೆಯಿಂದ ಆಗಿರುವ ತಪ್ಪನ್ನು ಒಪ್ಪಿಕೊಂಡ ಸಿಎಂಒ, 20 ಜನರಿಗೆ ಮೊದಲ ಮತ್ತು ಎರಡನೇ ಡೋಸ್ ವಿಭಿನ್ನ ಲಸಿಕೆಗಳನ್ನು ನೀಡಲಾಗಿದೆ. ವೈದ್ಯಕೀಯ ತಂಡಗಳು ಅವರ ಮೇಲೆ ನಿಗಾ ವಹಿಸುತ್ತಿವೆ ಎಂದು ಹೇಳಿದ್ದಾರೆ.</p>.<p>ವಿಭಿನ್ನ ಲಸಿಕೆಗಳನ್ನು ಪಡೆದ ಜನರು ಒತ್ತಡದಲ್ಲಿದ್ದಾರೆ. ಆದರೆ, ಅವರಲ್ಲಿ ಯಾರೊಬ್ಬರಿಗೂ ಇದುವರೆಗೆ ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/india-news/india-becomes-second-county-to-reach-20-crore-vaccination-coverage-after-us-833568.html"><strong>ಅಮೆರಿಕ ಬಳಿಕ 20 ಕೋಟಿ ಡೋಸ್ ಲಸಿಕೆ ವಿತರಿಸಿದ 2ನೇ ದೇಶ ಭಾರತ</strong></a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ಧಾರ್ಥನಗರ(ಉತ್ತರಪ್ರದೇಶ): </strong>ಮೊದಲ ಡೋಸ್ ಕೋವಿಶೀಲ್ಡ್ ಪಡೆದಿದ್ದ 20 ಗ್ರಾಮಸ್ಥರಿಗೆ ಕೋವ್ಯಾಕ್ಸಿನ್ ನೀಡಿ ಆರೋಗ್ಯ ಕಾರ್ಯಕರ್ತರು .ಅಚಾತುರ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ನಡೆದಿದೆ.</p>.<p>ಬರ್ಹ್ನಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಅಚಾತುರ್ಯ ನಡೆದಿದೆ. ಮೇ 14 ರಂದು ಆಡಾಹಿ ಕಲಾ ಮತ್ತು ಇನ್ನೊಂದು ಹಳ್ಳಿಯ ಗ್ರಾಮಸ್ಥರು ಇಲ್ಲಿ ಕೋವಾಕ್ಸಿನ್ ಲಸಿಕೆಗಳನ್ನು ಪಡೆದಿದ್ದಾರೆ.</p>.<p>ಘಟನೆ ಕುರಿತಂತೆ ತನಿಖೆಗೆ ಆದೇಶಿಸಿದ್ದು ಈ ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯ ವೈದ್ಯಕೀಯ ಅಧಿಕಾರಿ ಸಂದೀಪ್ ಚೌಧರಿ ಭರವಸೆ ನೀಡಿದ್ದಾರೆ.</p>.<p>ಲಸಿಕೆ ವ್ಯತ್ಯಾಸದಿಂದ ಹಳ್ಳಿಗರ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡುಬಂದಿಲ್ಲ. ಆರೋಗ್ಯ ಇಲಾಖೆಯ ತಂಡ ಈಗಾಗಲೇ ಅವರನ್ನು ಭೇಟಿ ಮಾಡಿದೆ ಎಂದು ಅವರು ಹೇಳಿದ್ದಾರೆ.</p>.<p>ಮೊದಲ ಮತ್ತು ಎರಡನೆಯ ಡೋಸ್ ವಿಭಿನ್ನ ಲಸಿಕೆಗಳನ್ನು ಪಡೆದಿದ್ದಾರೆ ಎಂದು ಗ್ರಾಮಸ್ಥ ರಾಮ್ ಸೂರತ್ ಅವರು, ಆರೋಗ್ಯ ಕಾರ್ಯಕರ್ತರ ಗಮನಕ್ಕೆ ತಂದಾಗ ಈ ಘಟನೆ ಬೆಳಕಿಗೆ ಬಂದಿದೆ.</p>.<p>ಆರೋಗ್ಯ ಕಾರ್ಯಕರ್ತರ ಕಡೆಯಿಂದ ಆಗಿರುವ ತಪ್ಪನ್ನು ಒಪ್ಪಿಕೊಂಡ ಸಿಎಂಒ, 20 ಜನರಿಗೆ ಮೊದಲ ಮತ್ತು ಎರಡನೇ ಡೋಸ್ ವಿಭಿನ್ನ ಲಸಿಕೆಗಳನ್ನು ನೀಡಲಾಗಿದೆ. ವೈದ್ಯಕೀಯ ತಂಡಗಳು ಅವರ ಮೇಲೆ ನಿಗಾ ವಹಿಸುತ್ತಿವೆ ಎಂದು ಹೇಳಿದ್ದಾರೆ.</p>.<p>ವಿಭಿನ್ನ ಲಸಿಕೆಗಳನ್ನು ಪಡೆದ ಜನರು ಒತ್ತಡದಲ್ಲಿದ್ದಾರೆ. ಆದರೆ, ಅವರಲ್ಲಿ ಯಾರೊಬ್ಬರಿಗೂ ಇದುವರೆಗೆ ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/india-news/india-becomes-second-county-to-reach-20-crore-vaccination-coverage-after-us-833568.html"><strong>ಅಮೆರಿಕ ಬಳಿಕ 20 ಕೋಟಿ ಡೋಸ್ ಲಸಿಕೆ ವಿತರಿಸಿದ 2ನೇ ದೇಶ ಭಾರತ</strong></a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>